ADVERTISEMENT

ಹರಪನಹಳ್ಳಿ: ಪತ್ನಿ ಹಣ ನೀಡದ್ದಕ್ಕೆ ಪತಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2024, 13:23 IST
Last Updated 7 ಅಕ್ಟೋಬರ್ 2024, 13:23 IST
<div class="paragraphs"><p>ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)</p></div>

ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)

   

ಹರಪನಹಳ್ಳಿ: ಹೆಂಡತಿ ಹಣ ಕೊಡಲಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಯೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಅಣಿಮೇಗಳ ತಾಂಡಾದಲ್ಲಿ ಜರುಗಿದೆ.

ಮಹಾಂತೇಶ್ ನಾಯ್ಕ (35) ಮೃತಪಟ್ಟವರು. ಮದ್ಯಪಾನ ಮತ್ತು ಇಸ್ಟೀಟ್ ಜೂಜಾಟದ ಚಟ ಹೊಂದಿದ್ದ ಮಹಾಂತೇಶ್, ಸೆ.21ರಂದು ಹೆಂಡತಿಗೆ ಕರೆಮಾಡಿ ₹5 ಸಾವಿರ ಕೊಡುವಂತೆ ಪೀಡಿಸಿದ್ದರು. ಪತ್ನಿ ಮೋತಿಬಾಯಿ ಹಣವಿಲ್ಲ ಎಂದು ಹೇಳಿದ್ದಕ್ಕಾಗಿ ಹೊಲದಲ್ಲಿ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು. ಸ್ಥಳೀಯರು ಕೂಡಲೇ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಹಲುವಾಗಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.