ಹರಪನಹಳ್ಳಿ: ಹೆಂಡತಿ ಹಣ ಕೊಡಲಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಯೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಅಣಿಮೇಗಳ ತಾಂಡಾದಲ್ಲಿ ಜರುಗಿದೆ.
ಮಹಾಂತೇಶ್ ನಾಯ್ಕ (35) ಮೃತಪಟ್ಟವರು. ಮದ್ಯಪಾನ ಮತ್ತು ಇಸ್ಟೀಟ್ ಜೂಜಾಟದ ಚಟ ಹೊಂದಿದ್ದ ಮಹಾಂತೇಶ್, ಸೆ.21ರಂದು ಹೆಂಡತಿಗೆ ಕರೆಮಾಡಿ ₹5 ಸಾವಿರ ಕೊಡುವಂತೆ ಪೀಡಿಸಿದ್ದರು. ಪತ್ನಿ ಮೋತಿಬಾಯಿ ಹಣವಿಲ್ಲ ಎಂದು ಹೇಳಿದ್ದಕ್ಕಾಗಿ ಹೊಲದಲ್ಲಿ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು. ಸ್ಥಳೀಯರು ಕೂಡಲೇ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಲುವಾಗಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.