ವಿಜಯಪುರ: ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಜರುಗಿದ ಕಾರ್ಯಕಾರಿ ಸಭೆಯಲ್ಲಿ 19ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ವಿ.ಡಿ.ಐಹೊಳ್ಳಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲೀಕಾರ, ‘ಮಾರ್ಚ್ 23 ಮತ್ತು 24ರಂದು ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಜಿಲ್ಲಾ ಸಮ್ಮೇಳನ ನಡೆಯಿಸಲು ತಿರ್ಮಾನಿಸಲಾಗಿದೆ’ ಎಂದು ಹೇಳಿದರು.
ಗೌರವಾಧ್ಯಕ್ಷೆ ಭಾರತಿ ಪಾಟೀಲ, ಕೋಶಾಧ್ಯಕ್ಷ ಸಂಗಮೇಶ ಮೇತ್ರಿ, ಗೌರವ ಕಾರ್ಯದರ್ಶಿ ಸುಭಾಸಚಂದ್ರ ಕನ್ನೂರ, ಮಾಧವ ಗುಡಿ, ಪದಾಧಿಕಾರಿಗಳಾದ ಅಭಿಷೇಕ ಚಕ್ರವರ್ತಿ, ಮಹ್ಮದ್ ಗೌಸ್ ಹವಾಲ್ದಾರ್, ರಾಜಾಸಾಬ ಶಿವನಗುತ್ತಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.