ವಿಜಯಪುರ: ಚಿಕ್ಕಮಗಳೂರಿನಲ್ಲಿ ಪೊಲೀಸರು ಮತ್ತು ವಕೀಲರ ನಡುವೆ ನಡೆದ ಸಂಘರ್ಷ ಖಂಡಿಸಿ ವಕೀಲರು ವಿಜಯಪುರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ, ಗಡಿನಾಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ವಕೀಲ ಸುಭಾಷ್ ಛಾಯಾಗೋಳ ಅವರು ಈ ವೇಳೆ ಪೊಲೀಸರಿಗೆ ಬಹಿರಂಗವಾಗಿ ಕೊಟ್ಟಿರುವ ಎಚ್ಚರಿಕೆಯ ಮಾತುಗಳು ವಿವಾದಕ್ಕೆ ಕಾರಣವಾಗಿದೆ.
‘ಇನ್ಮೇಲೆ ಯಾರಾದರೂ ಪೊಲೀಸರು ವಕೀಲರ ಮೇಲೆ ಹಲ್ಲೆ ಮಾಡಿದ್ರೆ, ನಾವು ವಕೀಲರು ನೂರು ಪೊಲೀಸರ ಕೊಲೆ ಮಾಡುವ ಕೆಲ್ಸ ಮಾಡ್ತಿವಿ. ಯಾಕಂದ್ರೆ ಇದು ಪೊಲೀಸರ ರಾಜ್ಯವಲ್ಲ, ವಕೀಲರ ರಾಜ್ಯ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.