ADVERTISEMENT

ದೇವರಹಿಪ್ಪರಗಿ | ‘ತಾಯಿ ಹೆಸರಿನಲ್ಲಿ ಸಸಿ ನೀಡಿ’

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2024, 15:56 IST
Last Updated 22 ಆಗಸ್ಟ್ 2024, 15:56 IST
ದೇವರಹಿಪ್ಪರಗಿ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ‘ತಾಯಿ ಹೆಸರಿನಲ್ಲಿ ಒಂದು ವೃಕ್ಷ’ ಅಭಿಯಾನದ ಅಂಗವಾಗಿ ಸಸಿ ನೆಟ್ಟು, ನೀರುಣಿಸಲಾಯಿತು
ದೇವರಹಿಪ್ಪರಗಿ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ‘ತಾಯಿ ಹೆಸರಿನಲ್ಲಿ ಒಂದು ವೃಕ್ಷ’ ಅಭಿಯಾನದ ಅಂಗವಾಗಿ ಸಸಿ ನೆಟ್ಟು, ನೀರುಣಿಸಲಾಯಿತು   

ದೇವರಹಿಪ್ಪರಗಿ: ಸಾಮಾಜಿಕ ಅರಣ್ಯ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿ  ಸಹಯೋಗದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ತಾಯಿ ಹೆಸರಿನಲ್ಲಿ ಇಲ್ಲಿನ ತಾ.ಪಂ ಆವರಣದಲ್ಲಿ ಒಂದು ವೃಕ್ಷ ಅಭಿಯಾನ ಗುರುವಾರ ಜರುಗಿತು.

ಸಾಮಾಜಿಕ ವಲಯ ಅರಣ್ಯ ಅಧಿಕಾರಿ ಎಂ.ವೈ.ಮಲಕ್ಕನ್ನವರ ಮಾತನಾಡಿ, ‘ಪ್ರಧಾನಿ ಆಶಯದಂತೆ ಪ್ರತಿಯೊಬ್ಬರೂ ತಾಯಿ ಹೆಸರಿನಲ್ಲಿ ಒಂದು ಸಸಿ ನೆಟ್ಟು, ಅದನ್ನು ಪೋಷಿಸಬೇಕು. ಜಿಲ್ಲೆಯಾದ್ಯಂತ  ಅರಣ್ಯ ಸಂರಕ್ಷಣೆ ಬಗ್ಗೆ ಜನರಲ್ಲಿ ವ್ಯಾಪಕವಾಗಿ ಜಾಗೃತಿ ಮೂಡಿಸುವ ಹಾಗೂ ಪರಿಸರ ರಕ್ಷಣೆ ಎಲ್ಲರ ಹೊಣೆ ಎಂದು ತಿಳಿಸುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದರು.

ಉಪವಲಯ ಅರಣ್ಯ ಅಧಿಕಾರಿ ಆರ್.ಎಚ್. ಬಿರಾದಾರ, ಐಇಸಿ ಸಂಯೋಜಕ ಸಿದ್ದು ಕಾಂಬಳೆ, ಜಿ.ಎಸ್. ರೋಡಗಿ, ಕಿರಣ ಪಾಟೀಲ, ಆನಂದ ಮುದೋಡಗಿ, ಪರಶುರಾಮ ಗುಬ್ಬೇವಾಡ, ಭೀಮರಾಯ ಭಾವಿಕಟ್ಟಿ, ಭಾರತಿ ಕೋಳಿ, ಭಾರತಿ ಸೇರಿದಂತೆ ಅರಣ್ಯ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.