ಇಂಡಿ: ಚುನಾವಣೆ ಆಯೋಗದ ಮಾರ್ಗಸೂಚಿ ಅನುಸಾರ ಕಾರ್ಯನಿರ್ವಹಿಸಬೇಕು ಎಂದು ಸಹಾಯಕ ಚುನಾವಣೆ ಅಧಿಕಾರಿ ಮತ್ತು ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.
ಪಟ್ಟಣದ ಆದರ್ಶ ಪ್ರೌಢಶಾಲೆಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಿಆರ್ಒ ಮತ್ತು ಎಪಿಆರ್ಒ ಅವರಿಗೆ ಭಾನುವಾರ ಆಯೋಜಿಸಿದ್ದ ಚುನಾವಣೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತರಬೇತಿಯಲ್ಲಿ 379 ಪಿಆರ್ಒ ಮತ್ತು 554 ಎಪಿಆರ್ಒ ಭಾಗವಿಹಿಸಿ ಚುನಾವಣೆ ತರಬೇತಿ ಪಡೆದರು. ಹೆಚ್ಚುವರಿ ಜಿಲ್ಲಾಧಿಕಾರಿ ಮಹಾದೇವಪ್ಪ ಮುರಗಿ, ತಹಶೀಲ್ದಾರ್ ಮಂಜುಳಾ ನಾಯಕ, ಇಒ ನೀಲಗಂಗಾ ಬಬಲಾದ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ, ಚುನಾವಣೆ ಶಿರಸ್ತೆದಾರ ಆರ್.ಬಿ.ಮೂಗಿ, ರವಿ ಮಡಿವಾಳರ, ಕೆವಿಕೆ ಮುಖ್ಯಸ್ಥ ಶಿವಶಂಕರಮೂತರ್ಿ, ಕ್ಷೇತ್ರಶಿಕ್ಷಣಾಧಿಕಾರಿ ಟಿ.ಎಸ್.ಅಲಗೂರ , ಶಿರಸ್ತೆದಾರ ಬಸವರಾಜ ರಾಹೂರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.