ಮುದ್ದೇಬಿಹಾಳ: ಪಟ್ಟಣದ ಅಂಬೇಡ್ಕರ್ ಸರ್ಕಲ್ ಸಮೀಪದ ಬೇಕರಿಯ ಶೆಟರ್ನ ಬೀಗ ಮುರಿದು ಒಳನುಗ್ಗಿದ ಕಳ್ಳ, ವಿವಿಧ ವಸ್ತುಗಳನ್ನು ದೋಚಿ ಪರಾರಿಯಾಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಅಲ್ಲಾಭಕ್ಷ ಬಿದರಕೋಟಿ ಎಂಬುವರ ‘ಕೇಕ್ ಪ್ಯಾಲೇಸ್’ ಬೇಕರಿಯಲ್ಲಿ ಅಕ್ಟೋಬರ್ 21ರಂದು ರಾತ್ರಿ ₹30 ಸಾವಿರ ಮೊತ್ತದ ವಸ್ತುಗಳ ಕಳವಾಗಿದೆ.
‘ಸಿಸಿಟಿ.ವಿ ಕ್ಯಾಮೆರಾದಲ್ಲಿ ದಾಖಲಾದ ದೃಶ್ಯಾವಳಿ ಆಧರಿಸಿ ಆರೋಪಿ ಪತ್ತೆಗೆ ಬಲೆ ಬೀಸಲಾಗಿದೆ’ ಎಂದು ಪ್ರಕರಣದ ಕುರಿತು ಪಿಎಸ್ಐ ಸಂಜಯ ತಿಪರೆಡ್ಡಿ, ಅಪರಾಧ ವಿಭಾಗದ ಪಿಎಸ್ಐ ಆರ್.ಎಲ್.ಮನ್ನಾಭಾಯಿ ತಿಳಿಸಿದ್ದಾರೆ.
ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.