ADVERTISEMENT

ಸಿಡಿಲು ಬಡಿದು ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2024, 15:40 IST
Last Updated 11 ಏಪ್ರಿಲ್ 2024, 15:40 IST

ವಿಜಯಪುರ: ಜಿಲ್ಲೆಯಲ್ಲಿ ಗುರುವಾರ ಸಿಡಿಲಾಘಾತಕ್ಕೆ ಇಬ್ಬರು ಸಾವನಪ್ಪಿದ್ದಾರೆ.

ಇಂಡಿ ಪಟ್ಟಣದಲ್ಲಿ ಬೀರಪ್ಪ ನಿಂಗಪ್ಪ ಅವರಾದಿ(15) ಹಾಗೂ ಮಸಳಿ ಬಿ.ಕೆ.ಗ್ರಾಮದ ಸೋಮಶೇಖರ ಪಟ್ಟಣಶೆಟ್ಟಿ (45)ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ.

ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಗುಡುಗು, ಸಿಡಿಲಿನೊಂದಿಗೆ ಉತ್ತಮ ಮಳೆಯಾಗಿದೆ.

ADVERTISEMENT

ತಿಕೋಟಾ,ಆಲಮಟ್ಟಿ, ಮುದ್ದೇಬಿಹಾಳ, ಸಿಂದಗಿ ತಾಲ್ಲೂಕು ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗಿದೆ.‌ ವಿಜಯಪುರ ನಗರದಲ್ಲಿ ತುಂತುರು ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.