ಚಡಚಣ: ಲೋಕಸಭಾ ಚುನಾವಣಾ ಹಿನ್ನೆಲೆ ಮಹಾರಾಷ್ಟ್ರ ರಾಜ್ಯದ ಮುಖಾಂತರ ಕರ್ನಾಟಕ ರಾಜ್ಯಕ್ಕೆ ಒಳಗೆ ಬರುವ ಪ್ರತಿಯೊಂದು ವಾಹನಗಳ ಮೇಲೆ ತಪಾಸಣೆ ಮಾಡುತ್ತಿದ್ದಾಗ ಧೂಳಖೇಡ ಚೆಕ್ ಪೋಸ್ಟ್ ನಲ್ಲಿ ದಾಖಲೆ ರಹಿತವಾದ ₹4.50 ಲಕ್ಷ ಬುಧವಾರ ಜಪ್ತಿ ಮಾಡಲಾಗಿದೆ.
ಮಹಾರಾಷ್ಟ್ರದ ಔರಂಗಾಬಾದ ಜಿಲ್ಲೆಯ ರೋಶನ ಗಜಾನನ ಕರನಾಶೆ ಅವರು ಯಾವುದೇ ಅಧಿಕೃತ ದಾಖಲೆ ಇಲ್ಲದೆ ಕಾರಿನಲ್ಲಿ ನಗದು ಹಣವನ್ನು ಧೂಳಖೇಡ ಮಾರ್ಗದಿಂದ ಬೆಂಗಳೂರ ಕಡೆ ಹೊರಟಿದ್ದರು. ಧೂಳಖೇಡ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ಈ ಹಣ ಜಪ್ತಿ ಮಾಡಿ ಜಿಲ್ಲಾ ಸೀಜರ್ ಕಮೀಟಿಯವರಿಗೆ ಒಪ್ಪಸಲಾಗಿದೆ.
ಎಸ್ಎಸ್ಟಿಟಿಎಂ ನಂ 13 ರ ಅಧಿಕಾರಿಗಳಾದ ಪರಮೇಶ್ವರ ತಳವಾರ, ಎಸ್ ಜೆ ಪೂಜಾರಿ, ಎನ್ ಎಸ್ ಸಾತಲಗಾಂವ, ಪಿಎಸ್ಐ ಹೊನ್ನಪ್ಪ ತಳವಾರ, ಇದ್ದರು. ಝಳಕಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.