ADVERTISEMENT

ಸುರಪುರ | ಮಳಿಗೆಗಳ ಬಾಡಿಗೆ ಸ್ವಂತಕ್ಕೆ ಬಳಕೆ: ಆರೋಪ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2023, 15:36 IST
Last Updated 25 ನವೆಂಬರ್ 2023, 15:36 IST
ಸುರಪುರದಲ್ಲಿ ದಲಿತ ಸೇನೆ ಮುಖಂಡರು ತಹಶೀಲ್ದಾರ್‌ ಕೆ.ವಿಜಯಕುಮಾರ ಅವರಿಗೆ ಮನವಿ ಸಲ್ಲಿಸಿದರು
ಸುರಪುರದಲ್ಲಿ ದಲಿತ ಸೇನೆ ಮುಖಂಡರು ತಹಶೀಲ್ದಾರ್‌ ಕೆ.ವಿಜಯಕುಮಾರ ಅವರಿಗೆ ಮನವಿ ಸಲ್ಲಿಸಿದರು   

ಸುರಪುರ: ‘ಎಪಿಎಂಸಿ ಪ್ರಾಂಗಣದಲ್ಲಿ ಮಳಿಗೆಗಳನ್ನು ನಿಯಮದ ಅನುಸಾರ ಟೆಂಡರ್ ಕರೆಯದೆ ಅನಧಿಕೃತವಾಗಿ ಬಾಡಿಗೆ ನೀಡಿರುವ ಎಪಿಎಂಸಿ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿ ದಲಿತ ಸೇನೆ ಮುಖಂಡರು ತಹಶೀಲ್ದಾರ್ ಕೆ.ವಿಜಯಕುಮಾರ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ತಾಲ್ಲೂಕು ಸಮಿತಿ ಅಧ್ಯಕ್ಷ ಮರಿಲಿಂಗ ಗುಡಿಮನಿ ಮಾತನಾಡಿ ‘ಖಾನಾಪುರ ಮತ್ತು ಹಸನಾಪುರ ಎಪಿಎಂಸಿ ಪ್ರಾಂಗಣದಲ್ಲಿ ಮಳಿಗೆಗಳನ್ನು ನಿರ್ಮಿಸಲಾಗಿದೆ. ಸರ್ಕಾರದ ಸುತ್ತೋಲೆಯಂತೆ ಟೆಂಡರ್ ಕರೆದು ಬಾಡಿಗೆಗೆ ನೀಡುವ ನಿಯಮವಿದೆ. ಎಪಿಎಂಸಿ ಕಾರ್ಯದರ್ಶಿ ನಿಯಮ ಪಾಲಿಸದೆ ಅನಧಿಕೃತವಾಗಿ ನೀಡಿದ್ದಾರೆ’ ಎಂದು ದೂರಿದರು.

‘ಬಾಡಿಗೆ ನೀಡಿರುವ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ಇಲ್ಲ. ಹುಣಸಗಿ. ಕೆಂಭಾವಿ ಮತ್ತು ಕಕ್ಕೇರಾ ಉಪಮಾರುಕಟ್ಟೆಯಲ್ಲಿ ಕೂಡಾ ಮಳಿಗೆಗಳ ಬಾಡಿಗೆ ಟೆಂಡರ್ ಕರೆದಿಲ್ಲ. ಸುಮಾರು ₹50 ಲಕ್ಷದಿಂದ ₹60 ಲಕ್ಷ ಅವ್ಯವಹಾರವಾಗಿದೆ. ಇದರಲ್ಲಿ ಕೆಲ ಪ್ರಭಾವಿಗಳು ಭಾಗಿಯಾಗಿರುವ ಸಾಧ್ಯತೆ ಇದೆ’ ಎಂದು ಸಂಶಯ ವ್ಯಕ್ತಪಡಿಸಿದರು.

ADVERTISEMENT

‘ಈ ಕುರಿತು ತನಿಖೆ ಮಾಡಿಸಿ ತಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಮುಖಂಡರು ಆಗ್ರಹಿಸಿದರು.

ಹುಲಗಪ್ಪ ದೇವತ್ಕಲ್, ಮಹಾದೇವಪ್ಪ ಚಲುವಾದಿ, ತೇಜು ಹೊಸಮನಿ, ಪರುಶುರಾಮ ಬೋನ್ಹಾಳ, ಭೀಮರಾಯ, ಬಸವರಾಜ ಮಂಗಳೂರ, ಲೋಕೆಶ ದೇವಾಪುರ, ಸಂತೋಷ ಜೈನಾಪುರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.