ADVERTISEMENT

ಶಾಸಕ ರಾಜಾ ವೆಂಕಟಪ್ಪನಾಯಕ ಅಭಿಮಾನಿ ಸಾವು

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2024, 14:46 IST
Last Updated 25 ಫೆಬ್ರುವರಿ 2024, 14:46 IST
ಹಣಮಂತ ಹವಾಲ್ದಾರ
ಹಣಮಂತ ಹವಾಲ್ದಾರ   

ಸುರಪುರ: ಶಾಸಕ ರಾಜಾ ವೆಂಕಟಪ್ಪನಾಯಕ ಅವರ ನಿಧನದ ಸುದ್ದಿ ಕೇಳುತ್ತಿದ್ದಂತೆ ಅವರ ಅಪ್ಪಟ ಅಭಿಮಾನಿ ತಾಲ್ಲೂಕಿನ ಮಂಗಳೂರು ಗ್ರಾಮದ ಹಣಮಂತ ಸಾಯಬಣ್ಣ ಹವಾಲ್ದಾರ (48) ಹೃದಯಾಘಾತದಿಂದ ಭಾನುವಾರ ನಿಧನರಾದರು.

ಶಾಸಕ ರಾಜಾ ವೆಂಕಟಪ್ಪನಾಯಕ ಅವರು ಹಣಮಂತ ಅವರಿಗೆ ಗಂಗಾಕಲ್ಯಾಣ ಯೋಜನೆಯಲ್ಲಿ ಜಮೀನಿಗೆ ನೀರಾವರಿ ಸೌಲಭ್ಯ ಮತ್ತು ಆಶ್ರಯ ಮನೆ ಒದಗಿಸಿದ್ದರು.

ಮೃತರಿಗೆ ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರು ಇದ್ದಾರೆ. ಅಂತ್ಯಕ್ರಿಯೆ ಸೋಮವಾರ ಮಂಗಳೂರಿನಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.