ADVERTISEMENT

ಕೃಷ್ಣಾ ನದಿಗೆ 1.10 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2024, 16:10 IST
Last Updated 8 ಸೆಪ್ಟೆಂಬರ್ 2024, 16:10 IST
ನಾರಾಯಣಪುರದ ಬಸವಸಾಗರ ಜಲಾಶಯದ 25 ಕ್ರಸ್ಟ್‌ ಗೇಟ್‌ಗಳಿಂದ 1.10 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ 
ನಾರಾಯಣಪುರದ ಬಸವಸಾಗರ ಜಲಾಶಯದ 25 ಕ್ರಸ್ಟ್‌ ಗೇಟ್‌ಗಳಿಂದ 1.10 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ     

ನಾರಾಯಣಪುರ: ನಿರಂತರ ಒಳಹರಿವಿನಿಂದ ಭಾನುವಾರ ಬಸವಸಾಗರ ಜಲಾಶಯದ 25 ಕ್ರಸ್ಟ್‌ ಗೇಟ್‌ಗಳು ಹಾಗೂ ಖಾಸಗಿ ಎಂಪಿಸಿಎಲ್ ಜಲವಿದ್ಯುತ್ ಸ್ಥಾವರದ ಮೂಲಕ ಒಟ್ಟು 1.10 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ.

‘ಭಾನುವಾರ ಬಸವಸಾಗರಕ್ಕೆ ಆಲಮಟ್ಟಿ ಲಾಲ್ ಬಹುದ್ದೂರ ಶಾಸ್ತ್ರಿ ಜಲಾಶಯದಿಂದ 1.05 ಲಕ್ಷ ಕ್ಯುಸೆಕ್ ನೀರನ್ನು ಬಿಡುಗಡೆ ಮಾಡುತ್ತಿರುವುದರಿಂದ ಬಸವ ಸಾಗರ ಜಲಾಶಯದಿಂದ 1.10 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ’ ಎಂದು ಕೆಬಿಜೆಎನ್ಎಲ್ ಮೂಲಗಳಿಂದ ತಿಳಿದು ಬಂದಿದೆ.

ಉಭಯ ಜಲಾಶಯಗಳಿಗೆ ಸದ್ಯ ಒಳಹರಿವು ಅಣೆಕಟ್ಟುಗಳ ಮೇಲ್ಭಾಗದ ಪ್ರದೇಶ, ಮಹಾರಾಷ್ಟ್ರ, ರಾಜ್ಯ ಸೇರಿದಂತೆ ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆ ಪ್ರಮಾಣವನ್ನು ಅವಲಂಬಿಸಿದೆ. ಮಳೆ ಪ್ರಮಾಣ ತಗ್ಗಿದರೆ ಒಳಹರಿವು ಕಡಿಮೆಯಾಗುತ್ತದೆ. ಒಂದೊಮ್ಮೆ ಮಳೆ ಹೆಚ್ಚಾದರೆ ಒಳಹರಿವು ಹೆಚ್ಚಾಗಿ ಜಲಾಶಯಗಳಿಂದ ನದಿಗೆ ನೀರು ಹರಿಸುವುದನ್ನು ಹೆಚ್ಚಿಸಲಾಗುತ್ತದೆ.

ADVERTISEMENT

ಪ್ರಸ್ತುತ ಬಸವಸಾಗರದ ಗರಿಷ್ಠ ಸಂಗ್ರಹ ಮಟ್ಟ 491.82 ಮೀಟರ್‌ನಲ್ಲಿ 31.324 ಟಿಎಂಸಿ ಅಡಿ ನೀರು ಸಂಗ್ರಹ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.