ADVERTISEMENT

ಎಂಥಾ ಮಾತು

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2024, 23:30 IST
Last Updated 10 ಏಪ್ರಿಲ್ 2024, 23:30 IST
<div class="paragraphs"><p>ಮುುಕುಲ್‌ ವಾಸ್ನಿಕ್‌</p></div>

ಮುುಕುಲ್‌ ವಾಸ್ನಿಕ್‌

   

ಭಾರತದ ಪ್ರಜಾಪ್ರಭುತ್ವವು ದೊಡ್ಡ ಸವಾಲನ್ನು ಎದುರಿಸುತ್ತಿದ್ದು, ಬಿಜೆಪಿಯು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ 2024ರ ಲೋಕಸಭಾ ಚುನಾವಣೆಯು ಕೊನೆಯ ಚುನಾವಣೆ ಎಂಬುದು ಸಾಬೀತಾಗಲಿದೆ. ಬಿಜೆಪಿಯು ಸಂವಿಧಾನವನ್ನು ನಾಶ ಮಾಡಲು ಹವಣಿಸುತ್ತಿದೆ. ಎನ್‌ಡಿಎ ಸರ್ಕಾರದ ಕಳೆದ ಹತ್ತು ವರ್ಷಗಳ ಆಡಳಿತದಲ್ಲಿ ಅನ್ಯಾಯ, ಅರಾಜಕತೆ ಮತ್ತು ದ್ವೇಷ ತಾಂಡವವಾಡುತ್ತಿದ್ದು, ಈ ಕಾರಣಕ್ಕಾಗಿಯೇ ಇತಿಹಾಸದಲ್ಲಿ ದಾಖಲಾಗಲಿದೆ. ಕೇಂದ್ರ ಸರ್ಕಾರವು ಮಹಿಳೆಯರು, ಯುವಕರು, ವ್ಯಾಪಾರಿಗಳು ಮತ್ತು ರೈತರಿಗೆ ಮೋಸ ಮಾಡುತ್ತಿದೆ

–ಮುುಕುಲ್‌ ವಾಸ್ನಿಕ್‌, ಕಾಂಗ್ರೆಸ್‌ ಮುಖಂಡ

ADVERTISEMENT

ಬಹುಪತ್ನಿತ್ವ, ಬಾಲ್ಯ ವಿವಾಹ ಸೇರಿದಂತೆ ಮಿಯಾ ಸಮುದಾಯಕ್ಕೆ ಸಂಬಂಧಿಸಿರುವ ವಿಚಾರಗಳು ಅಸ್ಸಾಂನಲ್ಲಿ ಲೋಕಸಭಾ ಚುನಾವಣೆಯ ವಿಷಯಗಳಲ್ಲ. ಅಲ್ಪಸಂಖ್ಯಾತ ಸಮುದಾಯದವರ ಸಾಮಾಜಿಕ ಪರಿವರ್ತನೆಗಾಗಿ ಇಂತಹ ವಿಚಾರಗಳನ್ನು ಮುನ್ನೆಲೆಗೆ ತರುತ್ತೇನೆಯೇ ಹೊರತು ಅವರ ಮತಗಳಿಗಾಗಿ ಅಲ್ಲ. ನಾನು ಅವರಿರುವ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ. ಆದರೆ ಮತಗಳ ಬಗ್ಗೆ ಚರ್ಚಿಸುವುದಿಲ್ಲ. ಅವರ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ.

–ಹಿಮಂತ ಬಿಸ್ವ ಶರ್ಮಾ, ಅಸ್ಸಾಂ ಮುಖ್ಯಮಂತ್ರಿ

ಹಿಮಂತ ಬಿಸ್ವಾ ಶರ್ಮಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.