ನವದೆಹಲಿ : ಉದ್ಯಮಿ, ಕಾಂಗ್ರೆಸ್ನ ಮಾಜಿ ಸಂಸದ ನವೀನ್ ಜಿಂದಾಲ್ ಅವರು ‘ಕೈ’ಗೆ ಗುಡ್ಬೈ ಹೇಳಿ ಭಾನುವಾರ ಬಿಜೆಪಿ ಸೇರಿದರು. ಪ್ರಧಾನಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ ಪರಿಕಲ್ಪನೆಗೆ ಕೊಡುಗೆ ನೀಡುವ ಉದ್ದೇಶದಿಂದ ಬಿಜೆಪಿ ಸೇರಿರುವುದಾಗಿ ಅವರು ಹೇಳಿದ್ದಾರೆ. ಜಿಂದಾಲ್ ಅವರನ್ನು ಹರಿಯಾಣದ ಕುರುಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಸಿದೆ. ಅವರು 2004 ರಿಂದ 2014ರ ಅವಧಿಯಲ್ಲಿ ಇದೇ ಕ್ಷೇತ್ರದ ಸಂಸದರಾಗಿದ್ದರು.
ಹರಿಯಾಣ ಸಚಿವ ಬಿಜೆಪಿಗೆ (ಚಂಡೀಗಢ ವರದಿ): ಹರಿಯಾಣದ ಪಕ್ಷೇತರ ಶಾಸಕ ಮತ್ತು ಸಚಿವರೂ ಆಗಿರುವ ರಂಜಿತ್ ಸಿಂಗ್ ಚೌಟಾಲ ಅವರು ಭಾನುವಾರ ಬಿಜೆಪಿ ಸೇರಿದರು ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದರು. ಬಿಜೆಪಿಯು ಅವರನ್ನು ಹಿಸಾರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಚಿಂತನೆ ನಡೆಸಿದೆ ಎಂದು ಮೂಲಗಳು ಹೇಳಿವೆ.
ಶಿವಸೇನಾ ಸೇರಿದ ಕಾಂಗ್ರೆಸ್ ಶಾಸಕ (ಮುಂಬೈ ವರದಿ): ನಾಗಪುರ ಜಿಲ್ಲೆಯ ಉಮ್ರೇಡ್ ಶಾಸಕ ರಾಜು ಪರ್ವೆ ಅವರು ಭಾನುವಾರ ಕಾಂಗ್ರೆಸ್ ತೊರೆದು, ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಸೇರಿದರು. ಲೋಕಸಭಾ ಚುನಾವಣೆಯಲ್ಲಿ ಅವರನ್ನು ರಾಮ್ಟೆಕ್ ಕ್ಷೇತ್ರದಲ್ಲಿ, ಕಾಂಗ್ರೆಸ್ನ ರಶ್ಮಿ ಬಾರ್ವೆ ವಿರುದ್ದ ಕಣಕ್ಕಿಳಿಸುವ ಸಾಧ್ಯತೆಯಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.