ADVERTISEMENT

ಎಂಥಾ ಮಾತು

​ಪ್ರಜಾವಾಣಿ ವಾರ್ತೆ
Published 2 ಮೇ 2024, 22:45 IST
Last Updated 2 ಮೇ 2024, 22:45 IST
<div class="paragraphs"><p>ಶರದ್‌ ಪವಾರ್, ಎನ್‌ಸಿಪಿ ಶರದ್‌ ಪವಾರ್‌ ಬಣ &amp;&nbsp;ರಾಜೀವ್‌ ಚಂದ್ರಶೇಖರ್‌, ಕೇಂದ್ರ ಸಚಿವ</p></div>

ಶರದ್‌ ಪವಾರ್, ಎನ್‌ಸಿಪಿ ಶರದ್‌ ಪವಾರ್‌ ಬಣ & ರಾಜೀವ್‌ ಚಂದ್ರಶೇಖರ್‌, ಕೇಂದ್ರ ಸಚಿವ

   

ಪ್ರಧಾನಿ ನರೇಂದ್ರ ಮೋದಿ ಅವರು ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ. ಅವರ ಗಮನವನ್ನು ಬೇರೆಡೆಗೆ ಸೆಳೆಯುತ್ತಿದ್ದಾರೆ. ತಮ್ಮ ಭಾಷಣದಲ್ಲಿ ಸುಳ್ಳು ಹೇಳುವ ಪ್ರಧಾನಿಯನ್ನು ಈ ಹಿಂದೆ ಎಂದೂ ನೋಡಿರಲಿಲ್ಲ. ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮೋದಿ ಅವರಿಗೆ ಪ್ರಚಾರ ನಡೆಸಲು ಅನುಕೂಲ ಕಲ್ಪಿಸಲು ಮಹಾರಾಷ್ಟ್ರದಲ್ಲಿ ಐದು ಹಂತಗಳಲ್ಲಿ ಮತದಾನ ನಡೆಸಲಾಗುತ್ತಿದೆ

ಶರದ್‌ ಪವಾರ್, ಎನ್‌ಸಿಪಿ ಶರದ್‌ ಪವಾರ್‌ ಬಣ

ADVERTISEMENT

ಕಾಂಗ್ರೆಸ್‌ ಪಕ್ಷವು ಹತಾಶೆಗೊಂಡಿದ್ದು, ಸುಳ್ಳು ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿದೆ. ಮತಕ್ಕಾಗಿ ಆ ಪಕ್ಷವು ಓಲೈಕೆಯ ರಾಜಕಾರಣದ ಮೊರೆ ಹೋಗಿದೆ. ತಮ್ಮ ಸೇವೆ ಮಾಡಲು ಜನರು ಕಾಂಗ್ರೆಸ್‌ಗೆ ಹಲವು ಬಾರಿ ಅವಕಾಶಗಳನ್ನು ನೀಡಿದ್ದರು. ಆದರೆ ಆ ಪಕ್ಷವು ಜನರ ನಂಬಿಕೆಗೆ ದ್ರೋಹ ಎಸಗಿದೆ. ಸಂವಿಧಾನವನ್ನು ಬದಲಿಸುವ ಸಲುವಾಗಿ ಬಿಜೆಪಿಯು 400 ಕ್ಷೇತ್ರಗಳಲ್ಲಿ ಗೆಲ್ಲಲು ಬಯಸುತ್ತಿದೆ ಎಂದು ಕಾಂಗ್ರೆಸ್‌ ಸುಳ್ಳು ಹೇಳುತ್ತಿದೆ

ರಾಜೀವ್‌ ಚಂದ್ರಶೇಖರ್‌, ಕೇಂದ್ರ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.