ADVERTISEMENT

ಎಂಥಾ ಮಾತು

​ಪ್ರಜಾವಾಣಿ ವಾರ್ತೆ
Published 4 ಮೇ 2024, 23:18 IST
Last Updated 4 ಮೇ 2024, 23:18 IST
<div class="paragraphs"><p>ಅಮಿತ್‌ ಶಾ, ಸುಪ್ರಿಯಾ ಶ್ರೀನೆತ್‌</p></div>

ಅಮಿತ್‌ ಶಾ, ಸುಪ್ರಿಯಾ ಶ್ರೀನೆತ್‌

   

ಈ ಬಾರಿ ಕೇರಳದ ವಯನಾಡ್‌ ಕ್ಷೇತ್ರದಲ್ಲಿ ಸೋಲುವ ಭೀತಿ ಇರುವುದರಿಂದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಅಮೇಠಿಯ ಬದಲು ರಾಯ್‌ಬರೇಲಿಯಿಂದ ಕಣಕ್ಕಿಳಿದಿದ್ದಾರೆ. ಅಲ್ಲಿ ಅವರು ಭಾರಿ ಮತಗಳ ಅಂತರದಿಂದ ಸೋಲಲಿದ್ದಾರೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾದರೆ ಮೀಸಲಾತಿಯನ್ನು ರದ್ದು ಪಡಿಸಲಿದ್ದಾರೆ ಎಂದು ‘ರಾಹುಲ್‌ ಬಾಬಾ ಮತ್ತು ಕಂಪನಿ’ ಅಪಪ್ರಚಾರ ಮಾಡುತ್ತಿದೆ. ಕೆಲವು ರಾಜ್ಯಗಳಲ್ಲಿ ‘ಇಂಡಿಯಾ’ ಒಕ್ಕೂಟವು ದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ವರ್ಗದವರ ಮೀಸಲಾತಿಯನ್ನು ಕಸಿದು ಮುಸ್ಲಿಮರಿಗೆ ನೀಡಿದೆ

ಅಮಿತ್‌ ಶಾ, ಕೇಂದ್ರ ಗೃಹಸಚಿವ

ADVERTISEMENT

ಪಕ್ಷದ ಚುನಾವಣಾ ಕಾರ್ಯತಂತ್ರದ ಭಾಗವಾಗಿ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ರಾಯ್‌ಬರೇಲಿಯಿಂದ ಸ್ಪರ್ಧಿಸುತ್ತಿದ್ದಾರೆ. ಇದರಿಂದ ಬಿಜೆಪಿ ಮುಖಂಡರು ಭಯಗೊಂಡಿದ್ದಾರೆ. ರಾಹುಲ್‌ ಅವರು ಉತ್ತರ ಪ್ರದೇಶದಿಂದ ಮೂರು ಬಾರಿ ಮತ್ತು ಕೇರಳದಿಂದ ಒಮ್ಮೆ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಉತ್ತರದಲ್ಲಿ ಮತ್ತು ದಕ್ಷಿಣದಲ್ಲಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಅವರಿಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒಡಿಶಾ, ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ, ಕರ್ನಾಟಕದಿಂದ ಸ್ಪರ್ಧಿಸುವ ಧೈರ್ಯ ಇದೆಯೇ? ಈ ರಾಜ್ಯಗಳ ಜನರು ಭಾರತದವರಲ್ಲವೇ? 

ಸುಪ್ರಿಯಾ ಶ್ರೀನೆತ್‌, ಕಾಂಗ್ರೆಸ್‌ ನಾಯಕಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.