ADVERTISEMENT

ಅರುಣಾಚಲ: ಮುಖ್ಯಮಂತ್ರಿಯಾಗಿ ಪೇಮಾ ಖಂಡು ಪ್ರಮಾಣವಚನ ಸ್ವೀಕಾರ

ಪಿಟಿಐ
Published 13 ಜೂನ್ 2024, 6:02 IST
Last Updated 13 ಜೂನ್ 2024, 6:02 IST
<div class="paragraphs"><p>ಪೇಮಾ ಖಂಡು</p></div>

ಪೇಮಾ ಖಂಡು

   

ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಪೇಮಾ ಖಂಡು ಅವರು ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಿದರು.

ಪೇಮಾ ಖಂಡು ಅವರು ಅರುಣಾಚಲಕ್ಕೆ ಮೂರನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದರು. 

ADVERTISEMENT

ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಕೆ.ಟಿ.ಪರ್ನಾಯಕ್ ಅವರು ಪ್ರಮಾಣವಚನ ಬೋದಿಸಿದರು. ಇವರೊಂದಿಗೆ 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. 

ಬಿಜೆಪಿ ಸತತ ಮೂರನೇ ಬಾರಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, 60 ಸ್ಥಾನಗಳ ಪೈಕಿ 46 ಸ್ಥಾನಗಳನ್ನು ಗೆದ್ದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.