ADVERTISEMENT

ತೆಲಂಗಾಣ: ಬಿಜೆಪಿ ಮುಖಂಡ ಶ್ರೀಶೈಲಂ ಗೌಡ ಕಾಂಗ್ರೆಸ್‌ಗೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2024, 15:49 IST
Last Updated 5 ಏಪ್ರಿಲ್ 2024, 15:49 IST
   

ಹೈದರಾಬಾದ್‌: ತೆಲಂಗಾಣದ ಮಾಜಿ ಶಾಸಕ, ಕೂನ ಶ್ರೀಶೈಲಂ ಗೌಡ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಶುಕ್ರವಾರ ಸೇರ್ಪಡೆಗೊಂಡರು.

ಮುಖ್ಯಮಂತ್ರಿ ಎ.ರೇವಂತ್‌ ರೆಡ್ಡಿ, ಎಐಸಿಸಿ ತೆಲಂಗಾಣ ಉಸ್ತುವಾರಿ ದೀಪಾ ದಾಸ್ ಮುನ್ಶಿ ಅವರ ಸಮ್ಮುಖದಲ್ಲಿ ಶ್ರೀಶೈಲಂ ಅವರು ಪಕ್ಷಕ್ಕೆ ಸೇರಿದರು.

2021ರಲ್ಲಿ ಬಿಜೆಪಿಗೆ ಸೇರಿದ್ದ ಶ್ರೀಶೈಲಂ ಅವರು, ಕಳೆದ ನವೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.

ADVERTISEMENT

ಲೋಕಸಭಾ ಚುನಾವಣೆ ಮತದಾನ ಸನ್ನಿಹಿತವಾಗುತ್ತಿದ್ದಂತೆ ತೆಲಂಗಾಣದಲ್ಲಿ ಬಿಆರ್‌ಎಸ್‌ ಮತ್ತು ಇತರ ಪಕ್ಷಗಳ ನಾಯಕರು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.