ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಗುರುವಾರ ತಡರಾತ್ರಿ ಬಂಧಿಸಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ. ಪರಮೇಶ್ವರ, ನಾನು ಎಸ್ಐಟಿ ಅಧಿಕಾರಿಗಳನ್ನು ಭೇಟಿಯಾಗಿಲ್ಲ ಎಂದಿದ್ದಾರೆ. ತನಿಖೆಗೆ ಸಂಬಂಧಿಸಿದ ವಿಷಯಗಳನ್ನು ಅವರು ಗೌಪ್ಯವಾಗಿ ಇಟ್ಟುಕೊಳ್ತಾರೆ. ಪ್ರಜ್ವಲ್ರನ್ನು ಕಾನೂನು ಪ್ರಕಾರ ಅರೆಸ್ಟ್ ಮಾಡಿದ್ದಾರೆ. ಪ್ರಜ್ವಲ್ ತನಿಖೆಗೆ ಸಹಕಾರ ಕೊಡ್ತಿದ್ದಾರೆ ಅವರು ಕೊಡಲೇಬೇಕು. ಇನ್ನು ಸಾಕ್ಷಿಗಳನ್ನು ಪ್ರಜ್ವಲ್ ರೇವಣ್ಣ ಅವರು ನಾಶ ಮಾಡಿದ್ದಾರೆ ಎನ್ನುವುದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.