ADVERTISEMENT

ದಕ್ಷಿಣ ಕನ್ನಡ: ನಾಮಪತ್ರ ಹಿಂಪಡೆದ ಪಕ್ಷೇತರ ಅಭ್ಯರ್ಥಿ, 9 ಮಂದಿ ಕಣದಲ್ಲಿ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2024, 12:26 IST
Last Updated 8 ಏಪ್ರಿಲ್ 2024, 12:26 IST
<div class="paragraphs"><p>ಕ್ಯಾ.ಬ್ರಿಜೇಶ್ ಚೌಟ ಮತ್ತು&nbsp;ಆರ್.ಪದ್ಮರಾಜ್</p></div>

ಕ್ಯಾ.ಬ್ರಿಜೇಶ್ ಚೌಟ ಮತ್ತು ಆರ್.ಪದ್ಮರಾಜ್

   

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದ್ದ ಸತೀಶ್‌ ಬೂಡುಮಕ್ಕಿ ನಾಮಪತ್ರ ಹಿಂಪಡೆದ ಅಭ್ಯರ್ಥಿ.

ADVERTISEMENT

ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಪಕ್ಷೇತರ ಅಭ್ಯರ್ಥಿಗಳ ಪೈಕಿ ಫ್ರಾನ್ಸಿಸ್‌ ಲ್ಯಾನ್ಸಿ ಮಾಡ್ತಾ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು.

ಬಿಜೆಪಿಯ ಕ್ಯಾ.ಬ್ರಿಜೇಶ್‌ ಚೌಟ, ಕಾಂಗ್ರೆಸ್‌ನ ಆರ್‌.ಪದ್ಮರಾಜ್ , ಬಹುಜನ ಸಮಾಜ ಪಕ್ಷದ ಕಾಂತಪ್ಪ ಅಲಂಗಾರ್‌, ಕರ್ನಾಟಕ ರಾಷ್ಟ್ರ ಸಮಿತಿಯ ರಂಜಿನಿ ಎಂ, ಉತ್ತಮ ಪ್ರಜಾಕೀಯ ಪಕ್ಷದ ಕೆ.ಇ.ಮನೋಹರ, ಕರುನಾಡ ಸೇವಕ ಪಕ್ಷದ ದುರ್ಗಾಪ್ರಸಾದ್‌, ಪಕ್ಷೇತರರಾಗಿ ದೀಪಕ್ ರಾಜೇಶ್ ಕುವೆಲ್ಲೊ, ಮೆಕ್ಸಿಂ ಪಿಂಟೊ ಹಾಗೂ ಸುಪ್ರೀತ್‌ ಕುಮಾರ್‌ ಪೂಜಾರಿ ಕಣದಲ್ಲಿ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.