ADVERTISEMENT

LS polls | ಜೆಡಿಎಸ್ ನಾಯಕರಾದ ಮರಿತಿಬ್ಬೇಗೌಡ, ಅಪ್ಪಾಜಿಗೌಡ ಕಾಂಗ್ರೆಸ್‌ಗೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2024, 9:04 IST
Last Updated 22 ಮಾರ್ಚ್ 2024, 9:04 IST
   

ಬೆಂಗಳೂರು: ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕರು ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯರಾದ ಮರಿತಿಬ್ಬೇಗೌಡ ಮತ್ತು ಅಪ್ಪಾಜಿಗೌಡ ಶುಕ್ರವಾರ ಕಾಂಗ್ರೆಸ್ ಪಕ್ಷ ಸೇರಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಚಿವ ಚೆಲುವರಾಯಸ್ವಾಮಿ, ಶಾಸಕರಾದ ಉದಯ್, ರವಿಕುಮಾರ್ ಗಣಿಗ, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ಕೆ.‌ಸಲೀಂ ಅಹ್ಮದ್, ದಿನೇಶ್ ಗೂಳಿಗೌಡ ಇಬ್ಬರನ್ನೂ ಪಕ್ಷಕ್ಕೆ ಬರಮಾಡಿಕೊಂಡರು. ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಉಪಸ್ಥಿತರಿದ್ದರು.

ಮಂಡ್ಯ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್, ಮಾಜಿ ಸದಸ್ಯರಾದ ಯೋಗೇಶ್, ಮಂಜುನಾಥ್, ರಾಜರಾಜೇಶ್ವರಿ ಮತ್ತು ಬಿಜೆಪಿಯ ಆಶಾ ಸುರೇಶ್ ಕೂಡ ಕಾಂಗ್ರೆಸ್ ಪಕ್ಷ ಸೇರಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.