ADVERTISEMENT

ಲೋಕಸಭೆ ಚುನಾವಣೆ: ಕರಡಿ ಸಂಗಣ್ಣ ನಿರ್ಧಾರ ನಾಳೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2024, 23:52 IST
Last Updated 19 ಮಾರ್ಚ್ 2024, 23:52 IST
   

ಕೊಪ್ಪಳ: ಸತತ ಎರಡು ಬಾರಿ ಸಂಸದರಾಗಿರುವ ಬಿಜೆಪಿಯ ಸಂಗಣ್ಣ ಕರಡಿ ಅವರಿಗೆ ಈ ಬಾರಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಟಿಕೆಟ್‌ ತಪ್ಪಿದ್ದರಿಂದ ಮುನಿಸಿಕೊಂಡಿದ್ದು, ಅವರು ಬಂಡಾಯ ಏಳುವ ಸಾಧ್ಯತೆ ದಟ್ಟವಾಗಿದೆ. ತಮ್ಮ ಶಕ್ತಿ ಪ್ರದರ್ಶನಕ್ಕೆ ಮಾ. 21ರಂದು ನಗರದಲ್ಲಿ ಬೆಂಬಲಿಗರ ಸಭೆ ಕರೆದಿದ್ದಾರೆ.

ವೈದ್ಯ ಕೆ. ಬಸವರಾಜ ಕ್ಯಾವಟರ್‌ ಅವರಿಗೆ ಪಕ್ಷ ಟಿಕೆಟ್‌ ಘೋಷಿಸಿದ್ದು, ಅಂದಿನಿಂದಲೇ ಸಂಗಣ್ಣ ತಮ್ಮ ಪಕ್ಷದ ನಾಯಕರ ವಿರುದ್ಧ ಆಕ್ರೋಶ ಗೊಂಡಿದ್ದಾರೆ. ಅವರ ಮುನಿಸು ಕಡಿಮೆ ಮಾಡಲು ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ಹಲವು ರಾಜ್ಯ ನಾಯಕರು ಕರೆ ಮಾಡಿ ಮನವೊಲಿಸಲು ಮಾಡಿದ ಪ್ರಯತ್ನ ಫಲ ಕಂಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT