ADVERTISEMENT

ರಾಜ್ಯಕ್ಕೆ ಏನು ಕೊಡುಗೆ ನೀಡಿದ್ದೀರಿ ತಿಳಿಸಿ: ಮೋದಿಗೆ ಸಿದ್ದರಾಮಯ್ಯ ಸವಾಲು

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2024, 5:25 IST
Last Updated 13 ಏಪ್ರಿಲ್ 2024, 5:25 IST
<div class="paragraphs"><p>ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ&nbsp;</p></div>

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ 

   

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣೆ ಪ್ರಚಾರಕ್ಕೆ ಭಾನುವಾರ (ಏ.14) ಬರುತ್ತಿದ್ದು, ರಾಜ್ಯಕ್ಕೆ ಏನೇನು ಕೊಡುಗೆಗಳನ್ನು ನೀಡಿದ್ದೇನೆ ಎಂಬುದನ್ನು ತಿಳಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.

ಇಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, ಮೋದಿಯವರು ಪ್ರಚಾರಕ್ಕಾಗಿ ಮೈಸೂರಿಗೆ ಬರುತ್ತಿರುವುದಕ್ಕೆ‌ ನಮ್ಮ ಅಭ್ಯಂತರವೇನಿಲ್ಲ. ನಿರುದ್ಯೋಗ ನಿವಾರಣೆಗೆ ಏನು ಮಾಡಿದ್ದಾರೆ? ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗಿದೆ.‌ ಅದನ್ನು ಪರಿಹರಿಸಲು ಏನು ಮಾಡಿದ್ದಾರೆ? ಬರ ಪರಿಹಾರವನ್ನು ಈವರೆಗೂ ಕೊಟ್ಟಿಲ್ಲವೇಕೆ ಎಂಬುದನ್ನೆಲ್ಲ ತಿಳಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಅಂಬೇಡ್ಕರ್ ಬಂದರೂ ಸಂವಿಧಾನ ಬದಲಾಯಿಸಲು ಸಾಧ್ಯ ಇಲ್ಲ ಎಂಬ ಮೋದಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಸಂವಿಧಾನ ಬದಲಾಯಿಸುತ್ತೇವೆ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದ್ದರು. ಅವರ ಮೇಲೆ ಕ್ರಮ‌ ಕೈಗೊಳ್ಳಲಿಲ್ಲವೇಕೆ? ಅವರು ಕೇಂದ್ರ ಸಚಿವರಾಗಿದ್ದರು. ಅವರನ್ನೇಕೆ ಸ್ಥಾನದಿಂದ ತೆಗೆಯಲಿಲ್ಲ. ಅವರು ಉತ್ತರ ಕನ್ನಡದಲ್ಲಿ ಏನೂ ಅಭಿವೃದ್ಧಿ ಕೆಲಸ ಮಾಡಿರಲಿಲ್ಲ. ಮನೆಯಲ್ಲೇ ಕುಳಿತಿದ್ದ. ಚುನಾವಣೆ ಸಮಯದಲ್ಲಿ ಹೊರಗೆ ಬಂದಿದ್ದ. ಅವನು ಸೋಲುತ್ತಾನೆಂದು ವರದಿ ಬಂದಿದ್ದರಿಂದಲೇ ಟಿಕೆಟ್ ಕೊಟ್ಟಿಲ್ಲ ಎಂದರು.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿಗಳನ್ನು ಸೆರೆ ಹಿಡಿದಿದ್ದಕ್ಕೆ ಎನ್‌ಐಎ ಹಾಗೂ ರಾಜ್ಯ ಪೊಲೀಸರಿಗೆ ಧನ್ಯವಾದ ಹೇಳಿದ ಮುಖ್ಯಮಂತ್ರಿ, ಆರೋಪಿಗಳನ್ನು ಕೋಲ್ಕತ್ತಾದಿಂದ ರಾಜ್ಯಕ್ಕೆ ಕರೆತರಲಾಗುತ್ತಿದೆ. ಉಳಿದ ವಿಚಾರಗಳು ತನಿಖೆಯಿಂದ ಗೊತ್ತಾಗಲಿವೆ ಎಂದು ಪ್ರತಿಕ್ರಿಯಿಸಿದರು.

ದೇಶದಲ್ಲಿ ಎನ್‌ಡಿಎಗೆ ಬಹುಮತ ಬರುವುದಿಲ್ಲ. ಐಎನ್‌ಡಿಐಎ ಒಕ್ಕೂಟಕ್ಕೆ ಬಹುಮತ ಸಿಗುವ ನಿರೀಕ್ಷೆ ಇದೆ. ರಾಜ್ಯದಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸ್ಥಾನ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.