ADVERTISEMENT

Video: ಕಲಬುರಗಿಯಲ್ಲಿ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ ಗೆಲುವಿಗೆ ಕಾರಣಗಳು

​ಪ್ರಜಾವಾಣಿ ವಾರ್ತೆ
Published 4 ಜೂನ್ 2024, 9:34 IST
Last Updated 4 ಜೂನ್ 2024, 9:34 IST

ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ ಗೆಲುವಿನ ನಗೆ ಬೀರಿದ್ದಾರೆ. ತುರುಸಿನ ಸ್ಪರ್ಧೆಯಲ್ಲಿ ಬಿಜೆಪಿಯ ಡಾ. ಉಮೇಶ ಜಾಧವ್ ಅವರನ್ನು ಮಣಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಪ್ರಿಯಾಂಕ ಖರ್ಗೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು. ಅಳಿಯನನ್ನು ಗೆಲ್ಲಿಸುವ ಮೂಲಕ ಖರ್ಗೆಯವರು ತಮ್ಮ ಸೋಲಿನ ಸೇಡನ್ನು ತೀರಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.