ADVERTISEMENT

ಬಾಗಲಕೋಟೆ ಲೋಕಸಭಾ ಕ್ಷೇತ್ರದ ‘ಕೈ’ ಟಿಕೆಟ್‌ಗಾಗಿ ವೀಣಾ ಕಣ್ಣೀರು

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2024, 0:41 IST
Last Updated 21 ಮಾರ್ಚ್ 2024, 0:41 IST
<div class="paragraphs"><p>ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಜೊತೆ ಮಾತನಾಡುತ್ತಿರುವುದು.</p><p></p></div>

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಜೊತೆ ಮಾತನಾಡುತ್ತಿರುವುದು.

   

ನವದೆಹಲಿ: ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿರುವ ವೀಣಾ ಕಾಶಪ್ಪನವರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬುಧವಾರ ಭೇಟಿ ಮಾಡಿ ಲಾಬಿ ನಡೆಸಿದರು. ಟಿಕೆಟ್‌ ಕೈತಪ್ಪುವ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಅವರು ಕಣ್ಣೀರು ಹಾಕಿದರು. 

ADVERTISEMENT

ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘2019ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಯಾರೂ ಮುಂದೆ ಬಂದಿರಲಿಲ್ಲ. ಕಷ್ಟದ ಸಮಯದಲ್ಲಿ ನಾನು ಸ್ಪರ್ಧೆ ಮಾಡಿದ್ದೇನೆ. ಸೋಲು ಗೆಲುವು ಲೆಕ್ಕಿಸದೆ ಸ್ಪರ್ಧೆಯೊಡ್ಡಿದ್ದೆ. ಜಿಲ್ಲೆಯಲ್ಲಿ ಕಳೆದ ಬಾರಿ ನಮ್ಮ ಪಕ್ಷದ ಶಾಸಕರು ಇರಲಿಲ್ಲ. ಈಗ ಐದು ಮಂದಿ ಶಾಸಕರು ಇದ್ದಾರೆ. ಆದರೆ, ನನಗೆ ಅವಕಾಶ ನೀಡಲು ನಿರಾಕರಿಸುತ್ತಿದ್ದಾರೆ’ ಎಂದರು. 

‘ಟಿಕೆಟ್‌ ಆಕಾಂಕ್ಷಿಯಾಗಿರುವ ಸಂಯುಕ್ತಾ ಪಾಟೀಲ ಯಾರು ಎಂಬುದು ಕ್ಷೇತ್ರದವರಿಗೆ ಗೊತ್ತಿಲ್ಲ. ಪಕ್ಷಕ್ಕಾಗಿ ದುಡಿದವರನ್ನು ಪರಿಗಣಿಸುತ್ತಿಲ್ಲ. ಪಟ್ಟಿ ಬಿಡುಗಡೆಯಾಗುವ ತನಕ ಕಾಯುತ್ತೇನೆ. ಬಳಿಕ ನನ್ನ ನಿರ್ಧಾರ ತಿಳಿಸುತ್ತೇನೆ’ ಎಂದು ಅವರು ಹೇಳಿದರು. 

ವೀಣಾ ಅವರ ಪತಿ, ಶಾಸಕ ವಿಜಯಾನಂದ ಕಾಶಪ್ಪನವರ, ‘ವೀಣಾ ಅವರು ಸಂಕಷ್ಟದ ಸಮಯದಲ್ಲಿ ಕಣಕ್ಕೆ ಇಳಿದಿದ್ದರು. ಈ ಸಲವೂ ಅವರಿಗೆ ಅವಕಾಶ ನೀಡಬೇಕು. ಇಲ್ಲದಿದ್ದರೆ ಕಾರ್ಯಕರ್ತರ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು. 

ವೀಣಾಗೆ ಟಿಕೆಟ್‌ ಕೊಡದಿದ್ದರೆ ತಕ್ಕ ಪಾಠ; ಸ್ವಾಮೀಜಿ ಎಚ್ಚರಿಕೆ
ಬೆಂಗಳೂರು: ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ವೀಣಾ ಕಾಶಪ್ಪನವರ ಅವರಿಗೆ ಟಿಕೆಟ್‌ ನೀಡದಿದ್ದರೆ, ಪಂಚಮಸಾಲಿ ಸಮುದಾಯ ಕಾಂಗ್ರೆಸ್‌ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದೆ ಎಂದು ಕೂಡಲ ಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು. ಬುಧವಾರ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಮುಖಂಡರನ್ನು ಭೇಟಿಯಾಗಿ ವೀಣಾ ಕಾಶಪ್ಪನವರಿಗೆ ಏಕೆ ಟಿಕೆಟ್‌ ನೀಡಬೇಕು ಎಂಬುದನ್ನು ಮನವರಿಕೆ ಮಾಡುವ ಪ್ರಯತ್ನ ನಡೆಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸ್ವಾಮೀಜಿ, ‘ಬಾಗಲಕೋಟೆ ಕ್ಷೇತ್ರದಿಂದ ಸಂಯುಕ್ತ ಪಾಟೀಲ ಅವರಿಗೆ ಟಿಕೆಟ್‌ ನೀಡುವ ನಿರ್ಧಾರವನ್ನು ಪುನರ್‌ ಪರಿಶೀಲನೆ ಮಾಡಬೇಕು. ಒಂದು ವೇಳೆ ಇದೇ ಅಂತಿಮ ನಿರ್ಧಾರ ಎಂದರೆ, ನಾವು ಕೂಡ ಚುನಾವಣೆಯಲ್ಲಿ ಒಮ್ಮತದ ನಿರ್ಣಯ ಮಾಡಬೇಕಾಗುತ್ತದೆ’ ಎಂದು ಸ್ವಾಮೀಜಿ ಹೇಳಿದರು. ಸಂಯುಕ್ತ ಪಾಟೀಲ ಅವರಿಗೆ ಬಾಗಲಕೋಟೆ ಕ್ಷೇತ್ರ ಬಿಟ್ಟು ಬೇರೆ ಕಡೆ ಕೊಡಲಿ. ಆದರೆ, ಸ್ಥಳೀಯರೇ ಆದ ವೀಣಾ ಕಾಶಪ್ಪನವರಿಗೆ ಟಿಕೆಟ್‌ ನಿರಾಕರಿಸಿದ್ದರ ಉದ್ದೇಶವಾದರೂ ಏನು ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.