ADVERTISEMENT

ಸಿನಿ ಸುದ್ದಿ | ಸ್ಮೈಲ್ ಶ್ರೀನುಗೆ ಜೊತೆಯಾದ ಕೆ.ಮಂಜು 

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2024, 0:03 IST
Last Updated 18 ಅಕ್ಟೋಬರ್ 2024, 0:03 IST
ಸ್ಮೈಲ್‌ ಶ್ರೀನು, ಕೆ.ಮಂಜು
ಸ್ಮೈಲ್‌ ಶ್ರೀನು, ಕೆ.ಮಂಜು   

‘ರಾಜಾಹುಲಿ’, ‘ರಾಮ ಶಾಮ ಭಾಮ’ ಸೇರಿದಂತೆ ಸಾಕಷ್ಟು ಸಿನಿಮಾಗಳನ್ನು ನಿರ್ಮಿಸಿರುವ ನಿರ್ಮಾಪಕ ಕೆ.ಮಂಜು ಈಗ ಯುವ ನಿರ್ದೇಶಕ ಸ್ಮೈಲ್ ಶ್ರೀನು ಜೊತೆ ಕೈಜೋಡಿಸಿದ್ದಾರೆ. ‘ತೂಫಾನ್’, ’ಬಳ್ಳಾರಿ ದರ್ಬಾರ್’ ಮೊದಲಾದ ಚಿತ್ರಗಳನ್ನು ನಿರ್ದೇಶಿಸಿರುವ ಸೀನು ಅವರ ಹೊಸ ಚಿತ್ರವನ್ನು ಕೆ.ಮಂಜು ನಿರ್ಮಾಣ ಮಾಡಲಿದ್ದಾರೆ.

‘ಸ್ಮೈಲ್ ಶ್ರೀನು, ನಾನು ಸೇರಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವಂಥ ಒಂದು ಸಿನಿಮಾ ಮಾಡಬೇಕೆಂದು ಬಹಳ ದಿನಗಳಿಂದ ಅಂದುಕೊಂಡಿದ್ದೆವು. ಈ ಬಗ್ಗೆ ಸಾಕಷ್ಟು ಚರ್ಚಿಸಿದ್ದೆವು. ಅದಕ್ಕೀಗ ಕಾಲ ಕೂಡಿಬಂದಿದೆ. ಇದೊಂದು ನ್ಯಾಷನಲ್ ಸಬ್ಜೆಕ್ಟ್ ಆಗಿದ್ದು, ಸಾಮಾಜಿಕ ಕಳಕಳಿ ಇರುವ, ಇಡೀ ಪ್ರಪಂಚಕ್ಕೆ ಗೊತ್ತಿರುವ ದೊಡ್ಡ ವ್ಯಕ್ತಿಯೊಬ್ಬರ ಬದುಕಿನ ನೈಜಘಟನೆ ಆಧಾರಿತ ಚಿತ್ರ. ಸದ್ಯ ಚಿತ್ರದ ಸ್ಕ್ರಿಪ್ಟ್ ವರ್ಕ್ ನಡೆಯುತ್ತಿದೆ. ಇದು ಯಾರ ಕುರಿತಾದ ಚಿತ್ರ ಮತ್ತು ಕಲಾವಿದರುಗಳು ಯಾರೆಂದು ಶೀಘ್ರದಲ್ಲಿ ತಿಳಿಸುತ್ತೇವೆ’ ಎಂದಿದ್ದಾರೆ ಕೆ.ಮಂಜು.

‘ನಾನು ಈವರೆಗೆ ಗುಣಮಟ್ಟದ ಸಿನಿಮಾಗಳನ್ನೇ ನಿರ್ದೇಶನ ಹಾಗೂ ನಿರ್ಮಾಣ ಮಾಡುತ್ತಾ ಬಂದಿರುವೆ. ಅವುಗಳನ್ನು ಸರಿಯಾದ ರೀತಿಯಲ್ಲಿ ಹೇಗೆ ಮಾರ್ಕೆಟಿಂಗ್ ಮಾಡಬೇಕು, ಚಿತ್ರಗಳನ್ನು ಯಾವ ರೀತಿ ಜನರಿಗೆ ತಲುಪಿಸಬೇಕು ಎಂಬುದನ್ನು ತಿಳಿದುಕೊಳ್ಳಲು ನನ್ನ ಚಿತ್ರಕ್ಕೆ ಅನುಭವಿ ನಿರ್ಮಾಪಕರು ಹಾಗೂ ಖ್ಯಾತ ವಿತರಕರೂ ಆದ ಕೆ. ಮಂಜು ಅವರು ಜೊತೆಯಾಗಿದ್ದಾರೆ. ಉಳಿದ ಮಾಹಿತಿಗಳನ್ನು ಶೀಘ್ರದಲ್ಲಿ ಹಂಚಿಕೊಳ್ಳುತ್ತೇವೆ’ ಎಂದು ಸೀನು ತಿಳಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.