ರಾಮ್ ಗೋಪಾಲ್ ವರ್ಮ ಅವರ ‘ಡೇಂಜರಸ್’ ಚಿತ್ರದಿಂದ ಜನಪ್ರಿಯರಾಗಿರುವ ನಟಿ ಅಪ್ಸರ ರಾಣಿ ‘ಮುದುಡಿದ ಎಲೆಗಳು’ ಚಿತ್ರದ ಮೂಲಕ ಕನ್ನಡಕ್ಕೆ ಕಾಲಿಟ್ಟಿದ್ದಾರೆ. ಹಿಂದಿ, ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಅಪ್ಸರ ಕೆಮಿಸ್ಟ್ರಿ ಟೀಚರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
ಎಂ.ಶಂಕರ್ ನಿರ್ದೇಶನ ಹಾಗೂ ನಿರ್ಮಾಣದ ಚಿತ್ರದಲ್ಲಿ ಅಪ್ಸರ ರಾಣಿ ಅವರು ಅಭಿನಯಿಸಿದ ಹಾಡಿನ ಚಿತ್ರೀಕರಣ ಇತ್ತೀಚೆಗಷ್ಟೆ ನಡೆಯಿತು.
‘ಈಗಾಗಲೇ ಎಂಬತ್ತರಷ್ಟು ಚಿತ್ರೀಕರಣ ಮುಕ್ತಾಯವಾಗಿದೆ. ಕೆಲವು ಭಾಗಗಳ ಚಿತ್ರೀಕರಣ ಮಾತ್ರ ಬಾಕಿಯದೆ. ಒಂದು ಹಾಡಿನ ಚಿತ್ರೀಕರಣ ಕಾಶ್ಮೀರದಲ್ಲಿ ನಡೆದಿದೆ. ಮತ್ತೊಂದು ಹಾಡು ತಜಕಿಸ್ತಾನದಲ್ಲಿ ಚಿತ್ರೀಕರಣಗೊಳ್ಳಲಿದೆ’ ಎಂದರು ನಿರ್ದೇಶಕರು.
ರಂಜಿತ್ ಕುಮಾರ್ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಪಂಕಜ್ ನಾರಾಯಣ್, ಪಾವನ ಗೌಡ, ನಿಕಿತಾ ಸ್ವಾಮಿ, ಸೂರ್ಯದರ್ಶನ್, ಪ್ರೀತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹರ್ಷಿಕಾ ಪೂಣಚ್ಛ, ರಮೇಶ್ ಭಟ್, ಭವ್ಯ, ಶೋಭರಾಜ್ ಮುಂತಾದವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಕಾಸ್ ವಸಿಷ್ಠ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಶ್ಯಾಮ್ ಸಿಂಧನೂರು ಅವರ ಛಾಯಾಚಿತ್ರಗ್ರಹಣವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.