ಕುಂಜಾರ ಫಿಲಂಸ್ ಲಾಂಛನದಲ್ಲಿ ಸಿದ್ಧಗೊಂಡಿರುವ ‘ಕಬಂಧ’ ತೆರೆಗೆ ಬರಲು ಸಜ್ಜಾಗುತ್ತಿದೆ. ಸತ್ಯನಾಥ್ ಆ್ಯಕ್ಷನ್ ಕಟ್ ಹೇಳಿರುವ ಈ ಸಿನಿಮಾದಲ್ಲಿ ಕಿಶೋರ್, ಪ್ರಸಾದ್ ವಶಿಷ್ಠ, ಪ್ರಿಯಾಂಕ ಮುಖ್ಯಭೂಮಿಕೆಯಲ್ಲಿದ್ದಾರೆ.
ಇತ್ತೀಚೆಗೆ ಗೆಳೆತನ ಕುರಿತಾದ ಲಿರಿಕಲ್ ಹಾಡು ಬಿಡುಗಡೆಯಾಯಿತು. ಕೆ.ಕಲ್ಯಾಣ್ ಸಾಹಿತ್ಯದಲ್ಲಿ ಸಾನಿತೇಜ್ ಸಂಗೀತದಲ್ಲಿ ಮೂಡಿಬಂದಿರುವ ಈ ಹಾಡನ್ನು ವಾಸುಕಿ ವೈಭವ್ ಹಾಡಿದ್ದಾರೆ. ‘ಕೆಲವು ವರ್ಷಗಳ ಹಿಂದೆ ನಡೆದ ಪ್ರಕರಣ ರಾಜ್ಯದಾದ್ಯಂತ ಭಯ ಹುಟ್ಟಿಸಿತ್ತು. ಇದನ್ನೇ ಬಳಸಿಕೊಂಡು ಒಂದಷ್ಟು ಹಾರರ್ ರೂಪಕೊಟ್ಟು ಸನ್ನಿವೇಶಗಳನ್ನು ಸೃಷ್ಟಿಸಲಾಗಿದೆ. ಅದರಲ್ಲೂ ವ್ಯವಸಾಯದಲ್ಲಿ ಸಮಸ್ಯೆಗಳು ಹಲವು ವರ್ಷಗಳಿಂದ ಇದೆ. ಇಂತಹ ವಿಚಾರ, ವಿಷಯಗಳನ್ನು ಹೆಕ್ಕಿ ಮನರಂಜನೆ ಮೂಲಕ ಕಥೆ ಹೇಳುವ ಪ್ರಯತ್ನ ಮಾಡಲಾಗಿದೆ’ ಎನ್ನುತ್ತಾರೆ ಸತ್ಯನಾಥ್.
ಅವಿನಾಶ್, ಯೋಗರಾಜ್ ಭಟ್, ವಂದನ, ವಚನ, ವಿಶಾಲ್, ನಾಗಾರ್ಜುನ ಸ್ವಾಮಿ, ಚಂದ್ರು, ಛಾಯಾಶ್ರೀ, ಪ್ರಶಾಂತ್ ಸಿದ್ದಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ದಾವಣಗೆರೆ, ತುಮಕೂರು ಮುಂತಾದ ಕಡೆಗಳಲ್ಲಿ 40 ದಿನಗಳ ಕಾಲ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.