ADVERTISEMENT

‘ಯಾಕೆ’ ಎಂಬ ಹೊಸಬರ ಯತ್ನ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2024, 23:40 IST
Last Updated 20 ಅಕ್ಟೋಬರ್ 2024, 23:40 IST
ಅಮಿತಾ ರಂಗನಾಥ್‌, ಉತ್ತಮ್‌ 
ಅಮಿತಾ ರಂಗನಾಥ್‌, ಉತ್ತಮ್‌    

ಬಹುತೇಕ ಹೊಸಬರಿಂದಲೇ ಕೂಡಿರುವ ‘ಯಾಕೆ’ ಚಿತ್ರ ಮುಂದಿನ ತಿಂಗಳಲ್ಲಿ ಸೆಟ್ಟೇರಲಿದೆ. ನಟ ಶ್ರೀನಗರ ಕಿಟ್ಟಿ ಇತ್ತೀಚೆಗಷ್ಟೇ ಚಿತ್ರದ ಶೀರ್ಷಿಕೆ ಅನಾವರಣಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ಸೀತಾ ಹರ್ಷವರ್ಧನ್ ಬಂಡವಾಳ ಹೂಡಿದ್ದು, ಪ್ರೇಮ್‌ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. 

‘ಎರಡು ಭಾಷೆಗಳಲ್ಲಿ ಚಿತ್ರವು ನಿರ್ಮಾಣವಾಗುತ್ತಿದ್ದು, ಕನ್ನಡದಲ್ಲಿ ‘ಯಾಕೆ’, ತೆಲುಗಿನಲ್ಲಿ ‘ಸಂಸ್ಥಾನಂ’ ಎಂಬ ಶೀರ್ಷಿಕೆ ಇಡಲಾಗಿದೆ. ನಮ್ಮ ಪ್ರಯತ್ನಕ್ಕೆ ಅಮೆಜಾನ್ ಮತ್ತು ಹೈದರಾಬಾದಿನ ಖುಷಿ ಸಿನಿಮಾ ಸಂಸ್ಥೆ ಜೊತೆಗೂಡಿದೆ. ಕನ್ನಡದಲ್ಲಿ ನನ್ನ ಮೊದಲ ಚಿತ್ರ‌. ಮುಂದಿನ ತಿಂಗಳಿನಿಂದ ಚಿತ್ರೀಕರಣ ಆರಂಭಿಸುತ್ತಿದ್ದೇವೆ. ಎಲ್ಲರಿಗೂ ಇಷ್ಟವಾಗುವ ಕಥೆಯನ್ನು ಈ ಚಿತ್ರ ಒಳಗೊಂಡಿದೆ’ ಎಂದು ಮಾಹಿತಿ ನೀಡಿದರು ನಿರ್ದೇಶಕ ಪ್ರೇಮ್‌. 

ಉತ್ತಮ್‌ ಚಿತ್ರದ ನಾಯಕ. ಇವರಿಗೆ ಅಮಿತಾ ರಂಗನಾಥ್‌ ಜೊತೆಯಾಗಿದ್ದಾರೆ. ನಿರ್ಮಾಪಕಿ ಸೀತಾ ಹರ್ಷವರ್ಧನ್ ಮಾತನಾಡಿ, ‘ನಾನು ಕನ್ನಡ, ತೆಲುಗಿನ ಹಲವು ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿದ್ದೇನೆ. ಮುಂದಿನ ವರ್ಷ ಏಪ್ರಿಲ್‌ ವೇಳೆಗೆ ಚಿತ್ರವನ್ನು ತೆರೆಗೆ ತರುವ ಉದ್ದೇಶವಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಒಳ್ಳೆಯ ಚಿತ್ರಗಳನ್ನು ನಿರ್ಮಿಸುವ ಉದ್ದೇಶವಿದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.