ADVERTISEMENT

ತಾಯಿ ಕಳೆದುಕೊಂಡ ಸುದೀಪ್‌ಗೆ ಕನ್ನಡದಲ್ಲೇ ಸಂತಾಪ ವ್ಯಕ್ತಪಡಿಸಿದ ಪವನ್ ಕಲ್ಯಾಣ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಅಕ್ಟೋಬರ್ 2024, 15:47 IST
Last Updated 20 ಅಕ್ಟೋಬರ್ 2024, 15:47 IST
ಪವನ್ ಕಲ್ಯಾಣ್‌
ಪವನ್ ಕಲ್ಯಾಣ್‌   

ಬೆಂಗಳೂರು: ತಾಯಿಯನ್ನು ಕಳೆದುಕೊಂಡ ನಟ ಸುದೀಪ್‌ ಅವರಿಗೆ ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರು ಕನ್ನಡದಲ್ಲೇ ಸಂತಾಪ ವ್ಯಕ್ತಪಡಿಸಿದ್ದಾರೆ.

ಆಂಧ್ರ ‍ಪ್ರದೇಶ ಉಪಮುಖ್ಯಮಂತ್ರಿ ಕಚೇರಿ ‘ಎಕ್ಸ್‌’ ಖಾತೆಯಿಂದ ಅವರು ಬರೆದ ಸಂತಾಪ ಪತ್ರವನ್ನು ಪೋಸ್ಟ್ ಮಾಡಲಾಗಿದೆ.

‘ಶ್ರೀ ಸುದೀಪ್ ಅವರ ಕುಟುಂಬಕ್ಕೆ ತೀವ್ರ ಸಂತಾಪಗಳು’ ಎಂದು ಪತ್ರದ ಒಕ್ಕಣೆಯಲ್ಲಿ ಬರೆಯಲಾಗಿದೆ.

ADVERTISEMENT

ಅವರು ಬರೆದ ಪತ್ರ ಹೀಗಿದೆ;

‘ಖ್ಯಾತ ನಟ ಶ್ರೀ ಕಿಚ್ಚ ಸುದೀಪ್ ಅವರ ತಾಯಿ ಶ್ರೀಮತಿ ಸರೋಜಾ ಅವರು ವಿಧಿವಶರಾಗಿದ್ದಾರೆ ಎಂದು ತಿಳಿದು ದುಃಖವಾಗಿದೆ. ಶ್ರೀಮತಿ ಸರೋಜಾ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ತಮ್ಮ ನಟನೆಯ ಮೇಲೆ ತಾಯಿಯ ಪ್ರಭಾವ ಮತ್ತು ಪ್ರೋತ್ಸಾಹವಿದೆ ಎಂದು ಶ್ರೀ ಸುದೀಪ್ ಅವರು ಹೇಳಿದ್ದರು. ತಾಯಿಯ ನಷ್ಟದಿಂದ ಬೇಗ ಚೇತರಿಸಿಕೊಳ್ಳಬೇಕು. ಶ್ರೀ ಸುದೀಪ್ ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು’.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ನಟ ಸುದೀಪ್‌ ಅವರ ತಾಯಿ ಸರೋಜಾ ಸಂಜೀವ್‌ ಭಾನುವಾರ ಬೆಳಿಗ್ಗೆ ನಿಧನರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.