ADVERTISEMENT

ಜಾರ್ಖಂಡ್‌: 18 ಬಿಜೆಪಿ ಶಾಸಕರು ವಿಧಾನಸಭೆಯಿಂದ ಅಮಾನತು

ಪಿಟಿಐ
Published 1 ಆಗಸ್ಟ್ 2024, 8:53 IST
Last Updated 1 ಆಗಸ್ಟ್ 2024, 8:53 IST
<div class="paragraphs"><p>ಸದನದಲ್ಲಿ ಗದ್ದಲ ( ಸಾಂಕೇತಿಕ ಚಿತ್ರ)</p></div>

ಸದನದಲ್ಲಿ ಗದ್ದಲ ( ಸಾಂಕೇತಿಕ ಚಿತ್ರ)

   

ರಾಂಚಿ: ಜಾರ್ಖಂಡ್‌ನ 18 ಬಿಜೆಪಿ ಶಾಸಕರನ್ನು ನಾಳೆ ( ಆಗಸ್ಟ್‌2) 2ಗಂಟೆಯವರೆಗೆ ವಿಧಾನಸಭೆಯಿಂದ ಅಮಾನತುಗೊಳಿಸಲಾಗಿದ್ದು, ಮಾರ್ಷಲ್‌ಗಳ ಸಹಾಯದಿಂದ ಶಾಸಕರನ್ನು ಇಂದು (ಗುರುವಾರ) ಸದನದಿಂದ ಹೊರಗೆ ಕಳುಹಿಸಲಾಗಿದೆ.

ನಿನ್ನೆ ವಿರೋಧ ಪಕ್ಷದ ಶಾಸಕರನ್ನು ಸದನದಿಂದ ಹೊರಗೆ ಕಳುಹಿಸಿದ್ದರ ವಿರುದ್ಧ ಸದನದಲ್ಲಿ ಗದ್ದಲವನ್ನು ಸೃಷ್ಟಿಸುವ ಮೂಲಕ ಸದನಕ್ಕೆ ಅಡ್ಡಿಪಡಿಸಿದ ಕಾರಣದಿಂದಾಗಿ ಸ್ಪೀಕರ್ ರವೀಂದ್ರ ನಾಥ್ ಮಹ್ತೋ ಅವರು ಬಿಜೆಪಿ ಸದಸ್ಯರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ADVERTISEMENT

ಮುಖ್ಯಮಂತ್ರಿ ಹೇಮಂತ್‌ ಸೊರೇನ್ ಅವರು ಉದ್ಯೋಗ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಿಲ್ಲವೆಂದು ಸದನದಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿತ್ತು.

ಅಧಿವೇಶನ ಆರಂಭಕ್ಕೂ ಮುನ್ನ ಬಿಜೆಪಿ ಶಾಸಕರು ಸದನದ ಬಾವಿಗೆ ಇಳಿದು ಮುಖ್ಯಮಂತ್ರಿ ಹೇಮಂತ್ ಸೊರೇನ್ ರಾಜೀನಾಮೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು ಹಾಗೂ ಕೆಲವು ದಾಖಲೆಗಳನ್ನು ಹರಿದು ಹಾಕಿದ್ದಾರೆ. ಈ ವೇಳೆ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ತೀವ್ರ ಮಾತಿನ ಜಟಾಪಟಿಗೆ ಮುಂದಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.