ADVERTISEMENT

ಕೇಜ್ರಿವಾಲ್ ಬಂಧನ: ಜನರ ಬೆಂಬಲ ಪಡೆಯಲು ಎಎಪಿಯಿಂದ 200 ‘ಸಂಕಲ್ಪ ಸಭೆ’

ಪಿಟಿಐ
Published 15 ಏಪ್ರಿಲ್ 2024, 14:26 IST
Last Updated 15 ಏಪ್ರಿಲ್ 2024, 14:26 IST
Aam Aadmi Party logo (Wikimedia commons)
Aam Aadmi Party logo (Wikimedia commons)   

ನವದೆಹಲಿ: ಮುಖ್ಯಮಂತ್ರಿ ಕೇಜ್ರಿವಾಲ್ ಬಂಧನದ ವಿರುದ್ಧ ಜನರ ಬೆಂಬಲ ಪಡೆಯಲು ರಾಷ್ಟ್ರ ರಾಜಧಾನಿಯ ನಾಲ್ಕು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಎಎಪಿಯು 200 ‘ಸಂಕಲ್ಪ ಸಭೆ’ಗಳನ್ನು ನಡೆಸಲಿದೆ ಎಂದು ಪಕ್ಷದ ಮುಖಂಡ ಗೋಪಾಲ್ ರಾಯ್ ಸೋಮವಾರ ತಿಳಿಸಿದ್ದಾರೆ.

ದೆಹಲಿಯ 40 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುವ ‘ಸಂಕಲ್ಪ ಸಭೆ’ಗಳಲ್ಲಿ ಪಕ್ಷದ ಹಿರಿಯ ನಾಯಕರು ಮತ್ತು ಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ‌‌

ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಮತ್ತು ಗೋಪಾಲ್ ರಾಯ್ ಸಭೆಗಳ ನೇತೃತ್ವ ವಹಿಸಲಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.