ನವದೆಹಲಿ: ವಿಧಾನಸಭೆ ಚುನಾವಣೆ ಎದುರಿಸಲಿರುವ ಹರಿಯಾಣ, ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿ ನೀಡಲಿದ್ದಾರೆ. ಚುನಾವಣೆಯ ಮೇಲೆ ಕಣ್ಣಿಟ್ಟು ಅವರು ಈ ಭೇಟಿಗೆ ಸಜ್ಜಾಗಿದ್ದಾರೆ.
ಜುಲೈ 29ರಂದು ಹರಿಯಾಣಕ್ಕೆ, ಜುಲೈ 5ರಂದು ಮಹಾರಾಷ್ಟ್ರಕ್ಕೆ ಅವರು ಭೇಟಿ ನೀಡಲಿದ್ದು ನಂತರದಲ್ಲಿ ಜಾರ್ಖಂಡ್ ಭೇಟಿ ನಿಗದಿಯಾಗಿದೆ ಎಂದು ಮೂಲಗಳು ಹೇಳಿವೆ. ಹರಿಯಾಣದ ಪಂಚಕುಲಾದಲ್ಲಿ ಶಾ ಅವರು ಪಕ್ಷದ ನಾಯಕರನ್ನು ಭೇಟಿ ಮಾಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.