ADVERTISEMENT

ತಾಂತ್ರಿಕ ದೋಷ: ಬೆಂಗಳೂರಿಗೆ ಹೊರಟಿದ್ದ ವಿಮಾನ ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ

ಪಿಟಿಐ
Published 18 ಮೇ 2024, 10:27 IST
Last Updated 18 ಮೇ 2024, 10:27 IST
<div class="paragraphs"><p>ಏರ್ ಇಂಡಿಯಾ ಎಕ್ಸ್‌ಪ್ರೆಸ್</p></div>

ಏರ್ ಇಂಡಿಯಾ ಎಕ್ಸ್‌ಪ್ರೆಸ್

   

ತಿರುಚಿರಾಪಳ್ಳಿ (ತಮಿಳುನಾಡು): ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ತಿರುಚಿರಾಪಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವರದಿ ಮಾಡಿದೆ.

ತಿರುವನಂತಪುರದಿಂದ ಬೆಂಗಳೂರಿಗೆ ಹೊರಟ್ಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಕೂಡಲೇ ಎಚ್ಚೆತ್ತ ಪೈಲೆಟ್ ವಿಮಾನವನ್ನು ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದಾರೆ. ವಿಮಾನದಲ್ಲಿ 137 ಮಂದಿ ಪ್ರಯಾಣಿಕರಿದ್ದರು ಎಂದು ಮೂಲಗಳು ತಿಳಿಸಿವೆ.

ADVERTISEMENT

ಬೆಂಗಳೂರಿನತ್ತ ಹೊರಟಿದ್ದ ಏರ್‌ ಇಂಡಿಯಾ ವಿಮಾನದ ಹವಾನಿಯಂತ್ರಣ ಘಟಕದಲ್ಲಿ (ಎ.ಸಿ) ಬೆಂಕಿ ಕಾಣಿಸಿಕೊಂಡ ಕಾರಣ ವಿಮಾನವು ಶುಕ್ರವಾರ ಸಂಜೆ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರಳಿ ತುರ್ತು ಭೂಸ್ಪರ್ಶ ಮಾಡಿತ್ತು.

ಈ ವಿಮಾನದಲ್ಲಿ 175 ಮಂದಿ ಪ್ರಯಾಣಿಕರಿದ್ದರು. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ವಿಮಾನಯಾನ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.