ADVERTISEMENT

ರೈತರ ಪ್ರತಿಭಟನೆ ಕುರಿತು ಸಂಸದೆ ಕಂಗನಾ ಹೇಳಿಕೆ: ಅಂತರ ಕಾಯ್ದುಕೊಂಡ BJP

ಏಜೆನ್ಸೀಸ್
Published 26 ಆಗಸ್ಟ್ 2024, 11:28 IST
Last Updated 26 ಆಗಸ್ಟ್ 2024, 11:28 IST
ನಟಿ ಕಂಗನಾ ರನೌತ್
ನಟಿ ಕಂಗನಾ ರನೌತ್   

ನವದೆಹಲಿ: ರೈತರು ನಡೆಸಿದ ಪ್ರತಿಭಟನೆ ಕುರಿತು ಹೇಳಿಕೆ ನೀಡಿದ್ದ ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ, ನಟಿ ಕಂಗನಾ ರನೌತ್ ಅವರ ಪ್ರತಿಕ್ರಿಯೆಯಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ.

ರೈತರ ಧರಣಿಯು ಬಾಂಗ್ಲಾದೇಶ ಮಾದರಿಯ ಪರಿಸ್ಥಿತಿಯನ್ನು ಭಾರತದಲ್ಲಿ ಸೃಷ್ಟಿಸುವ ಹುನ್ನಾರವಾಗಿತ್ತು ಎಂದು ಕಂಗನಾ ಆರೋಪಿಸಿದ್ದರು.

ಸಂಸದೆಯ ಹೇಳಿಕೆ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಬಿಜೆಪಿ, ‘ಸಂಸದರ ರೈತ ವಿರೋಧಿ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಸರ್ಕಾರದ ನೀತಿಗಳ ಕುರಿತು ಹೇಳಿಕೆ ನೀಡಲು ಕಂಗನಾ ಅವರಿಗೆ ಯಾವುದೇ ಅಧಿಕಾರವಿಲ್ಲ’ ಎಂದು ಸ್ಪಷ್ಟಪಡಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.