ನವದೆಹಲಿ: ‘ನಾರಿ ಶಕ್ತಿ’ಯ ಸ್ಫೂರ್ತಿಯು ವಿಕಸಿತ ಭಾರತ ನಿರ್ಮಾಣಕ್ಕೆ ಪ್ರೇರಣೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ನನ್ನ ಮೇಲೆ ತೋರುವ ಈ ವಾತ್ಸಲ್ಯವು ನನ್ನ ಹೃದಯ ಸ್ಪರ್ಶಿಸಿದೆ. ಸದಾ ಆಶೀರ್ವಾದಿಸುವ ನಾರಿ ಶಕ್ತಿಗೆ ನಾನು ಶಿರ ಭಾಗಿ ನಮಸ್ಕರಿಸುತ್ತೇನೆ. ಅವರ ಸ್ಫೂರ್ತಿಯೇ ವಿಕಸಿತ ಭಾರತ ನಿರ್ಮಾಣಕ್ಕೆ ಪ್ರೇರಣೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಒಡಿಶಾದ ಸುಂದರ್ಗಢ್ ಜಿಲ್ಲೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನದ ಸಂದರ್ಭದಲ್ಲಿ ಬುಡಕಟ್ಟು ಮಹಿಳೆಯರನ್ನು ಭೇಟಿಯಾದ ಚಿತ್ರಗಳನ್ನು ಬೈಜಯಂತ್ ಜಯ್ ಪಾಂಡಾ ಅವರು ‘ಎಕ್ಸ್‘ನಲ್ಲಿ ಹಂಚಿಕೊಂಡಿದ್ದಾರೆ.
ಬುಡಕಟ್ಟು ಮಹಿಳೆಯೊಬ್ಬರು ಪ್ರಧಾನಿ ಮೋದಿ ಅವರಿಗೆ ನಮ್ಮ ಪರವಾಗಿ ಧನ್ಯವಾದಗಳನ್ನು ತಿಳಿಸಿ ಎಂದು ನನಗೆ ₹100 ಕೊಟ್ಟರು ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.