ADVERTISEMENT

ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಉತ್ತರಾಧಿಕಾರಿ ಆಗಿ ಆಕಾಶ್‌ ಆನಂದ್‌ ಹೆಸರು ಘೋಷಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಜೂನ್ 2024, 10:48 IST
Last Updated 23 ಜೂನ್ 2024, 10:48 IST
<div class="paragraphs"><p>ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರಿಂದ ಆಕಾಶ್‌ ಆನಂದ್‌ ಅವರು&nbsp;ಆರ್ಶೀವಾದ ಪಡೆದುಕೊಂಡರು.</p></div>

ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರಿಂದ ಆಕಾಶ್‌ ಆನಂದ್‌ ಅವರು ಆರ್ಶೀವಾದ ಪಡೆದುಕೊಂಡರು.

   

ಪಿಟಿಐ ಚಿತ್ರ 

ನವದೆಹಲಿ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ್‌ ಆನಂದ್‌ ಅವರನ್ನು ತಮ್ಮ ಮುಂದಿನ ರಾಜಕೀಯ ಉತ್ತರಾಧಿಕಾರಿ ಎಂದು ಘೋಷಿಸಿದ್ದಾರೆ ಎಂದು ಪಕ್ಷದ ನಾಯಕ ಸರ್ವರ್‌ ಮಲಿಕ್‌ ಇಂದು( ಭಾನುವಾರ) ಹೇಳಿದ್ದಾರೆ.

ADVERTISEMENT

ಈ ಬಗ್ಗೆ ಸುದ್ದಿ ಸಂಸ್ಥೆ ’ಎಎನ್‌ಐ’ ವರದಿ ಮಾಡಿದೆ

ಆನಂದ್ ಅವರು ಪಕ್ಷದ ರಾಷ್ಟ್ರೀಯ ಸಂಯೋಜಕರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಮುಂಬರುವ ಪಂಜಾಬ್‌ ಮತ್ತು ಉತ್ತರಾಖಂಡ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಎಸ್‌ಪಿ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಆಕಾಶ್‌ ಆನಂದ್‌ ಅವರು ಸ್ಥಾನ ಪಡೆದುಕೊಂಡಿದ್ದಾರೆ.

ಈ ಹಿಂದೆಯೂ ಮಾಯಾವತಿಯವರ ರಾಜಕೀಯ ಉತ್ತರಾಧಿಕಾರಿ ಸ್ಥಾನಕ್ಕೆ ಆಕಾಶ್‌ ಆನಂದ್‌ ಹೆಸರು ಕೇಳಿಬಂದಿತ್ತು. ಆದರೆ ಅವರು ಸಂಪೂರ್ಣವಾಗಿ ಜವಾಜ್ದಾರಿ ವಹಿಸಿಕೊಳ್ಳಲು ಕಾಲಾವಕಾಶ ಬೇಕೆಂಬ ಚರ್ಚೆಗಳು ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.