ಚೆನ್ನೈ: ತಮಿಳುನಾಡು ಸಚಿವ ವಿ. ಸೆಂಥಿಲ್ ಬಾಲಾಜಿ ಅವರು ಸಲ್ಲಿಸಿರುವ ಜಾಮೀನು ಅರ್ಜಿ ಕುರಿತ ಆದೇಶವನ್ನು ಇಲ್ಲಿನ ಸೆಷನ್ಸ್ ನ್ಯಾಯಾಲಯವು ಇದೇ 12ರಂದು ಪ್ರಕಟಿಸಲಿದೆ.
ವಾದ–ಪ್ರತಿವಾದಿಗಳನ್ನು ಮಂಗಳವಾರ ಆಲಿಸಿದ ಸೆಷನ್ಸ್ ನ್ಯಾಯಾಧೀಶ ಎಸ್. ಅಲ್ಲಿ ಅವರು, ಜನವರಿ 12ಕ್ಕೆ ಆದೇಶ ಕಾಯ್ದಿರಿಸಿದ್ದಾಗಿ ಪ್ರಕಟಿಸಿದರು.
ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಕಳೆದ ವರ್ಷ ಜೂನ್ 14ರಂದು ಬಂಧಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.