ADVERTISEMENT

ತೆಲಂಗಾಣ: ಚಾಕುವಿನಿಂದ ಇರಿದು ಕಾಂಗ್ರೆಸ್ ನಾಯಕನ ಹತ್ಯೆ

ಪಿಟಿಐ
Published 22 ಅಕ್ಟೋಬರ್ 2024, 9:25 IST
Last Updated 22 ಅಕ್ಟೋಬರ್ 2024, 9:25 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಕರೀಂನಗರ (ತೆಲಂಗಾಣ): ಆಡಳಿತಾರೂಢ ಕಾಂಗ್ರೆಸ್ ನಾಯಕನನ್ನು ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ತೆಲಂಗಾಣದ ಜಗ್ತಿಯಾಲ ಜಿಲ್ಲೆಯಲ್ಲಿ ಇಂದು (ಮಂಗಳವಾರ) ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಗಾರೆಡ್ಡಿ (56) ಮೃತ ಕಾಂಗ್ರೆಸ್‌ ನಾಯಕ. ಜಗ್ತಿಯಾಲ ಜಿಲ್ಲೆಯ ಜಬಿತಾಪುರ ಗ್ರಾಮದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಇವರಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಗಂಗಾರೆಡ್ಡಿ ಅವರನ್ನು ಕಾರಿನಿಂದ ಇಳಿದ ವ್ಯಕ್ತಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ಪೊಲಿಸರು ಹೇಳಿದ್ದಾರೆ.

ADVERTISEMENT

ಸದ್ಯ ಮೃತದೇಹವನ್ನು ಜಗ್ತಿಯಾಲದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇವರು ಎಂಎಲ್‌ಸಿ ಜೀವನ್ ರೆಡ್ಡಿ ಅವರ ಆಪ್ತರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಹಳೆಯ ವೈಷಮ್ಯದಿಂದ ಕೊಲೆ ನಡೆದಿರಬಹುದು. ಆರೋಪಿ ತಲೆಮರೆಸಿಕೊಂಡಿದ್ದು, ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.