ADVERTISEMENT

ಸಿದ್ದೀಕಿ ಹತ್ಯೆ: ಬಿಷ್ಣೋಯ್‌ ಗ್ಯಾಂಗ್‌ ನಂಟು?

ಪಿಟಿಐ
Published 13 ಅಕ್ಟೋಬರ್ 2024, 15:36 IST
Last Updated 13 ಅಕ್ಟೋಬರ್ 2024, 15:36 IST
ಬಾಬಾ ಸಿದ್ದೀಕಿ
ಬಾಬಾ ಸಿದ್ದೀಕಿ   

ಮುಂಬೈ: ಮಾಜಿ ಸಚಿವ, ಎನ್‌ಸಿಪಿ (ಅಜಿತ್ ಪವಾರ್‌ ಬಣ) ಮುಖಂಡ ಬಾಬಾ ಸಿದ್ದೀಕಿ ಅವರ ಹತ್ಯೆಗೆ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌ ತಂಡಕ್ಕೂ ನಂಟಿದೆಯೇ ಎಂಬ ಆಯಾಮದಲ್ಲಿ ಮುಂಬೈ ಪೊಲೀಸರು ತನಿಖೆಗೆ ನಡೆಸುತ್ತಿದ್ದಾರೆ.

‘ಸಿದ್ದೀಕಿಅವರ ಹತ್ಯೆಯ ಹೊಣೆ ಹೊತ್ತು, ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಎನ್ನಲಾದ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು, ಇದರ ಸತ್ಯಾಸತ್ಯತೆ ಪರಿಶೀಲಿಸುತ್ತಿದ್ದೇವೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿದ್ದೀಕಿ ಅವರ ಕೊಲೆ ವ್ಯವಹಾರ ದ್ವೇಷ ಕಾರಣದಿಂದಾಗಿ ನಡೆದಿದೆಯೇ? ಸುಪಾರಿ ಕೊಲೆಯೊ? ಅಥವಾ ಕೊಳೆಗೇರಿ ಪುನರ್ವಸತಿ ಯೋಜನೆ ಸಂಬಂಧಿಸಿ ಆಗಿರುವ ಹತ್ಯೆಯೋ ಎಂಬುದು ಸೇರಿದಂತೆ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುವುದು. ತನಿಖೆಗಾಗಿ ರಚಿಸಿರುವ ತಂಡಗಳು ವಿವಿಧ ರಾಜ್ಯಗಳಿಗೆ ತೆರಳಿವೆ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.