ADVERTISEMENT

ತಾಂತ್ರಿಕ ಪರಿಣತಿಯೊಂದಿಗೆ ಸೈಬರ್ ಅಪರಾಧಗಳ ಸವಾಲು ಎದುರಿಸಲು ಕರೆ: ಸಚಿವ ರಾಯ್

ಪಿಟಿಐ
Published 20 ಸೆಪ್ಟೆಂಬರ್ 2024, 6:06 IST
Last Updated 20 ಸೆಪ್ಟೆಂಬರ್ 2024, 6:06 IST
ಸೈಬರ್ ಅಪರಾಧ (ಸಾಂದರ್ಭಿಕ ಚಿತ್ರ)
ಸೈಬರ್ ಅಪರಾಧ (ಸಾಂದರ್ಭಿಕ ಚಿತ್ರ)   

ಹೈದರಾಬಾದ್: ದೇಶದಲ್ಲಿ ಸೈಬರ್ ಅಪರಾಧಗಳು ದೊಡ್ಡ ಬೆದರಿಕೆಯಾಗಿ ಹೊರಹೊಮ್ಮಿವೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಶುಕ್ರವಾರ ಹೇಳಿದ್ದಾರೆ.

ಇಲ್ಲಿನ ಹೊರವಲಯದಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ಐಪಿಎಸ್ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ತಾಂತ್ರಿಕ ಪರಿಣತಿಯೊಂದಿಗೆ ಸೈಬರ್ ಅಪರಾಧಗಳ ಸವಾಲನ್ನು ಎದುರಿಸಬೇಕು ಎಂದು ಅವರು ಅಧಿಕಾರಿಗಳಿಗೆ ಕರೆ ನೀಡಿದರು. 

ADVERTISEMENT

ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ  76ನೇ ಬ್ಯಾಚ್‌ನ 207 ಅಧಿಕಾರಿಗಳು ಇಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಇವರ ಪೈಕಿ 58 ಮಹಿಳಾ ಅಧಿಕಾರಿಗಳು ತರಬೇತಿ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.