ADVERTISEMENT

ಸೂರತ್ |ಗಣಪತಿ ಉತ್ಸವದ ವೇಳೆ ಗುಂಪು ಘರ್ಷಣೆ; ಕಲ್ಲು ತೂರಾಟ ನಡೆಸಿದ 34 ಮಂದಿ ಬಂಧನ

ಪಿಟಿಐ
Published 9 ಸೆಪ್ಟೆಂಬರ್ 2024, 13:39 IST
Last Updated 9 ಸೆಪ್ಟೆಂಬರ್ 2024, 13:39 IST
<div class="paragraphs"><p>ಸೂರತ್‌ ನಗರದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ</p></div>

ಸೂರತ್‌ ನಗರದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ

   

–ಪಿಟಿಐ ಚಿತ್ರ

ಸೂರತ್: ನಗರದಲ್ಲಿನ ಗಣೇಶ ಪೆಂಡಾಲ್‌ವೊಂದಕ್ಕೆ ಭಾನುವಾರ ತಡರಾತ್ರಿ ಕಿಡಿಗೇಡಿಗಳು ಕಲ್ಲು ತೂರಿದ್ದರಿಂದ ಮೂರ್ತಿಗೆ ಹಾನಿಯಾಗಿದೆ.

ADVERTISEMENT

ಸೈಯದ್‌ಪುರ ಪ್ರದೇಶದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಕಾನೂನಿನ ಸಂಘರ್ಷಕ್ಕೆ ಒಳಗಾದ ಕೆಲವು ಬಾಲಕರನ್ನು ಪೊಲೀಸರು ಬಂಧಿಸಿದ ನಂತರ, ಸುಮಾರು 300 ಜನರ ಗುಂಪು ತಮ್ಮ ಸಮುದಾಯದ ಸದಸ್ಯರ ವಿರುದ್ಧದ ಕ್ರಮವನ್ನು ಪ್ರತಿಭಟಿಸಲು ಲಾಲ್‌ಗೇಟ್‌ ಪೊಲೀಸ್ ಠಾಣೆ ಮುಂಭಾಗ ಜಮಾಯಿಸಿತು.

ಈ ಸಂದರ್ಭ ಎರಡು ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಗಾಯಗೊಂಡಿದ್ದಾರೆ. ವಾಹನಕ್ಕೆ ಹಾನಿಯಾಗಿದೆ ಎಂದು ಸೂರತ್ ಪೊಲೀಸ್ ಆಯುಕ್ತ ಅನುಪಮ್ ಸಿಂಗ್ ಗೆಹಲೋತ್ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

ಉದ್ರಿಕ್ತ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಬೀಸಿ, ಅಶ್ರುವಾಯು ಪ್ರಯೋಗಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ 34 ಜನರನ್ನು ಬಂಧಿಸಲಾಗಿದ್ದು, ಎರಡು ಪ್ರತ್ಯೇಕ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.