ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಜತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಇಲ್ಲಿನ ನ್ಯಾಯಾಲಯವು ಜುಲೈ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕೇಜ್ರಿವಾಲ್ ಅವರು ಬುಧವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಕಲಾಪಕ್ಕೆ ಹಾಜರಾದರು.
ಮತ್ತೊಂದೆಡೆ ಇದೇ ಪ್ರಕರಣ ಸಂಬಂಧ ಇಲ್ಲಿನ ವಿಶೇಷ ನ್ಯಾಯಾಲಯವು, ಎಎಪಿ ಮುಖಂಡ ಮನೀಷ್ ಸಿಸೋಡಿಯಾ ಮತ್ತು ಬಿಆರ್ಎಸ್ ನಾಯಕಿ ಕೆ. ಕವಿತಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 25ರವರೆಗೆ ವಿಸ್ತರಿಸಿದೆ.
ಈ ಇಬ್ಬರ ನ್ಯಾಯಾಂಗ ಬಂಧನದ ಅವಧಿ ಬುಧವಾರ ಮುಕ್ತಾಯಗೊಂಡಿತ್ತು. ಹೀಗಾಗಿ, ಈ ಇಬ್ಬರನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ಎದುರು ಹಾಜರುಪಡಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.