ADVERTISEMENT

ಕವಿತಾ ವಿಚಾರಣೆ ನಡೆಸಲು ಸಿಬಿಐಗೆ ಅನುಮತಿ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2024, 14:11 IST
Last Updated 5 ಏಪ್ರಿಲ್ 2024, 14:11 IST
ಕೆ. ಕವಿತಾ
ಕೆ. ಕವಿತಾ   

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನು ತಿಹಾರ್‌ ಜೈಲಿನಲ್ಲಿ ವಿಚಾರಣೆ ನಡೆಸಲು ಇಲ್ಲಿನ ನ್ಯಾಯಾಲಯ ಸಿಬಿಐಗೆ ಶುಕ್ರವಾರ ಅನುಮತಿ ನೀಡಿದೆ.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮಾರ್ಚ್‌ 15ರಂದು ಬಂಧಿಸಿತ್ತು.

ನ್ಯಾಯಾಂಗ ಬಂಧನದಲ್ಲಿರುವ ಕವಿತಾ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ಕೋರಿ ಸಿಬಿಐ ಅರ್ಜಿ ಸಲ್ಲಿಸಿತ್ತು. ಇ.ಡಿ ಮತ್ತು ಸಿಬಿಐ ಪ್ರಕರಣಗಳ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಸಿಬಿಐ ಅನುಮತಿ ನೀಡಿ ಆದೇಶಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.