ADVERTISEMENT

ಭಾರಿ ಮಳೆಯಿಂದ ಹಲವು ಪ್ರದೇಶ ಜಲಾವೃತ: ತುರ್ತು ಸಭೆ ಕರೆದ ದೆಹಲಿ ಸರ್ಕಾರ

ಏಜೆನ್ಸೀಸ್
Published 28 ಜೂನ್ 2024, 9:09 IST
Last Updated 28 ಜೂನ್ 2024, 9:09 IST
<div class="paragraphs"><p>ಭಾರಿ ನೀರು ತುಂಬಿರುವ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ನಡೆಸುತ್ತಿರುವ ಜನರು</p></div>

ಭಾರಿ ನೀರು ತುಂಬಿರುವ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ನಡೆಸುತ್ತಿರುವ ಜನರು

   

ಪಿಟಿಐ ಚಿತ್ರ

ನವದೆಹಲಿ: ಭಾರಿ ಮಳೆಯಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಪ್ರದೇಶಗಳಲ್ಲಿ ನೀರು ನಿಂತಿದ್ದು, ಟ್ರಾಫಿಕ್‌ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಮಾಹಿತಿ ಪಡೆಯಲು ದೆಹಲಿ ಸರ್ಕಾರ ತುರ್ತು ಸಭೆ ಕರೆದಿದೆ.

ADVERTISEMENT

ಮಧ್ಯಾಹ್ನ ನಡೆಯುವ ಸಭೆಗೆ ಎಲ್ಲ ಸಚಿವರು ಹಾಗೂ ಉನ್ನತ ಅಧಿಕಾರಿಗಳು ಹಾಜರಾಗಲಿದ್ದಾರೆ.

ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್‌–1ರ ಮೇಲ್ಛಾವಣಿಯ ಒಂದು ಭಾಗ ಕುಸಿದಿದೆ. ಈ ಘಟನೆಯಿಂದಾಗಿ ಒಬ್ಬರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

ಬೆಳಿಗ್ಗೆ 3ಕ್ಕೆ ಆರಂಭವಾದ ಮಳೆ ಸುಮಾರು 15.37 ಸೆಂ.ಮೀ. ಯಷ್ಟು ಸುರಿದಿದೆ ಎಂದು ಸಫ್ದರ್‌ಜಂಗ್‌ ಹವಾಮಾನ ಕೇಂದ್ರ ಅಂದಾಜಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.