ನಾರಾಯಣಪುರ( ಛತ್ತೀಸ್ಗಢ): ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ಮಧ್ಯೆ ನಾರಾಯಣಪುರ ಜಿಲ್ಲೆಯಲ್ಲಿ ಮಂಗಳವಾರ ಗುಂಡಿನ ಚಕಮಕಿ ನಡೆಯಿತು ಎಂದು ಪೊಲೀಸರು ತಿಳಿಸಿದರು.
ಗುಂಡಿನ ಕಾಳಗದಲ್ಲಿ ಕೆಲ ನಕ್ಸಲರು ಹತ್ಯೆಯಾಗಿರಬಹುದು ಅಥವಾ ಗಾಯಗೊಂಡಿರಬಹುದು ಎಂದು ಹೇಳಿದರು.
ವಿವಿಧ ಭದ್ರತಾ ಪಡೆಗಳ ತಂಡಗಳು ಜಂಟಿಯಾಗಿ ಕೋಹಕಾಮೇಟಾ ಪೊಲೀಸ್ ಠಾಣೆಯ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಕೈಗೊಂಡಿದ್ದವು. ಭದ್ರತಾ ಪಡೆಗಳ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯ ಪಡೆ, ಗಡಿ ಭದ್ರತಾ ಪಡೆ ಮತ್ತು ಭಾರತ–ಟಿಬೆಟ್ ಗಡಿ ಪೊಲೀಸ್ ಪಡೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.