ತ್ರಿಶೂರ್: ಎರ್ನಾಕುಲಂ–ಟಾಟಾನಗರ ಎಕ್ಸ್ಪ್ರೆಸ್ ರೈಲು ತ್ರಿಶೂರ್ ರೈಲು ನಿಲ್ದಾಣದ ಮೂಲಕ ಶುಕ್ರವಾರ ಬೆಳಿಗ್ಗೆ ಸಂಚರಿಸುವ ವೇಳೆ ಎಂಜಿನ್ ಹಾಗೂ ಕೆಲವು ಕೋಚ್ಗಳು ಬೇರ್ಪಟ್ಟಿದ್ದವು ಎಂದು ರೈಲ್ವೆ ಮೂಲಗಳು ತಿಳಿಸಿವೆ.
‘ರೈಲಿನ ಮೂರನೇ ಕೋಚ್ ಬೇರ್ಪಟ್ಟಿದ್ದು, ಬೆಳಿಗ್ಗೆ 9.30ರ ವೇಳೆಗೆ ಈ ಘಟನೆ ನಡೆದಿದೆ. ಸಮಸ್ಯೆ ಬಗೆಹರಿಸಿದ ಬಳಿಕ ಪ್ರಯಾಣ ಮುಂದುವರಿಸಲಾಯಿತು’ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದರು.
‘ಘಟನೆ ನಡೆದ ವೇಳೆ ರೈಲು ನಿಧಾನವಾಗಿ ಚಲಿಸುತ್ತಿದ್ದರಿಂದ, ಯಾವುದೇ ಪ್ರಯಾಣಿಕರು ಗಾಯಗೊಂಡಿಲ್ಲ. ಎಂಜಿನ್ ಬೇರ್ಪಡಲು ಕಾರಣ ಇನ್ನಷ್ಟೇ ತಿಳಿಯಬೇಕಿದ್ದು, ಈ ಬಗ್ಗೆ ತನಿಖೆ ನಡೆಸಲಾಗುವುದು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.