ADVERTISEMENT

Delhi Excise Scam: ಕೇಜ್ರಿವಾಲ್‌ ನ್ಯಾಯಾಂಗ ಬಂಧನ ವಿಸ್ತರಣೆ

ಪಿಟಿಐ
Published 20 ಆಗಸ್ಟ್ 2024, 13:25 IST
Last Updated 20 ಆಗಸ್ಟ್ 2024, 13:25 IST
ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್   

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯವು ಮಂಗಳವಾರ ಆ. 27ರವರೆಗೆ ವಿಸ್ತರಿಸಿದೆ.

ಈ ಹಿಂದೆ ವಿಧಿಸಿದ್ದ ನ್ಯಾಯಾಂಗ ಬಂಧನದ ಅವಧಿಯು ಮುಗಿದಿದ್ದರಿಂದ ಅವರನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಕಸ್ಟಡಿ ಅವಧಿಯನ್ನು ವಿಸ್ತರಿಸಿದರು. 

ಕೇಜ್ರಿವಾಲ್ ವಿರುದ್ಧ ಸಿಬಿಐ ಸಲ್ಲಿಸಿರುವ ಪೂರಕ ಚಾರ್ಜ್‌ಶೀಟ್‌ ಅನ್ನು ನ್ಯಾಯಾಲಯವು ಆ.27ರಂದು ಪರಿಗಣಿಸುವ ಸಾಧ್ಯತೆಯಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.