ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ: ಕೇಜ್ರಿವಾಲ್‌, ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ಪಿಟಿಐ
Published 13 ಆಗಸ್ಟ್ 2024, 14:10 IST
Last Updated 13 ಆಗಸ್ಟ್ 2024, 14:10 IST
ಅರವಿಂದ್‌ ಕೇಜ್ರಿವಾಲ್‌– ಪಿಟಿಐ ಚಿತ್ರ
ಅರವಿಂದ್‌ ಕೇಜ್ರಿವಾಲ್‌– ಪಿಟಿಐ ಚಿತ್ರ   

ನವದೆಹಲಿ: ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್, ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರ ನ್ಯಾಯಾಂಗ ಬಂಧನವನ್ನು ಸೆ. 2ರವರೆಗೆ ವಿಸ್ತರಿಸಲಾಗಿದೆ.

ಈ ಹಿಂದೆ ನೀಡಿದ್ದ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾಗಿದ್ದರಿಂದ ಇಬ್ಬರನ್ನೂ ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಮಂಗಳವಾರ ಹಾಜರು‍ಪಡಿಸಲಾಯಿತು. ವಿಶೇಷ ನ್ಯಾಯಧೀಶೆ ಕಾವೇರಿ ಬವೇಜಾ ಅವರು ಬಂಧನದ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದರು.

ಕೆ.ಕವಿತಾ–ಪಿಟಿಐ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT