ADVERTISEMENT

ತಮಿಳುನಾಡು: ಲಾರಿ ಡಿಕ್ಕಿ ಹೊಡೆದು ಯಾತ್ರೆಗೆ ತೆರಳುತ್ತಿದ್ದ ಐವರು ಸಾವು

ಪಿಟಿಐ
Published 30 ಡಿಸೆಂಬರ್ 2023, 14:36 IST
Last Updated 30 ಡಿಸೆಂಬರ್ 2023, 14:36 IST
<div class="paragraphs"><p>ಅಪಘಾತ</p></div>

ಅಪಘಾತ

   

(ಸಾಂದರ್ಭಿಕ ಚಿತ್ರ)

ಪುದುಕೊಟ್ಟಾಯ್‌ (ತಮಿಳುನಾಡು): ಸಿಮೆಂಟ್‌ ಹೊತ್ತೊಯ್ಯುತ್ತಿದ್ದ ಲಾರಿಯೊಂದು ಎರಡು ವಾಹನಗಳಿಗೆ ಡಿಕ್ಕಿ ಹೊಡೆದು, ರಸ್ತೆ ಬದಿಯ ಟೀ ಅಂಗಡಿಗೆ ನುಗ್ಗಿದ ಪರಿಣಾಮ ಐವರು ಮೃತಪಟ್ಟು, 19 ಮಂದಿ ಗಾಯಗೊಂಡ ಘಟನೆ ಇಲ್ಲಿನ ನಮನಸಮುದ್ರಂನಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ADVERTISEMENT

ಯಾತ್ರೆಗೆ ತೆರಳುತ್ತಿದ್ದ ಭಕ್ತರು ಟೀ ಅಂಗಡಿಯೆದುರು ನಸುಕಿನ ಅವಧಿಯಲ್ಲಿ ತಮ್ಮ ವಾಹನ ನಿಲ್ಲಿಸಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ, ಕಾರು ಮತ್ತು ವ್ಯಾನ್‌ಗೆ ಡಿಕ್ಕಿ ಹೊಡೆದು ಟೀ ಅಂಗಡಿಯೊಳಗೆ ನುಗ್ಗಿದೆ ಎಂದು ತಿಳಿಸಿದ್ದಾರೆ.

‘ಕಾರಿನಲ್ಲಿ ತೆರಳುತ್ತಿದ್ದ ಭಕ್ತರು ಓಂ ಶಕ್ತಿ ದೇಗುಲಕ್ಕೆ ಮತ್ತು ವ್ಯಾನಿನಲ್ಲಿದ್ದ ಭಕ್ತರು ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ತೆಳುತ್ತಿದ್ದರು. ದುರ್ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾದರೆ, ಇನ್ನೊಬ್ಬರು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟರು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.